Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಗೋರಕ್ಷಣೆಯ ಹೆಸರಲ್ಲಿ ಇಬ್ಬರು ಮುಸ್ಲಿಮರನ್ನು ಕೊಲ್ಲಲಾಗಿದೆ

- Advertisement -
- Advertisement -

ಬಜರಂಗದಳದ ಗೂಂಡಾಗಳು ಇಬ್ಬರು ಮುಸ್ಲಿಮರನ್ನು ಹರಿಯಾಣ- ರಾಜಸ್ಥಾನ ಗಡಿಯಲ್ಲಿ ಹತ್ಯೆ ಮಾಡಿದ್ದಾರೆಂಬ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ.

ರಾಜಸ್ಥಾನದ ಮುಸ್ಲಿಂ ವ್ಯಕ್ತಿಗಳನ್ನು ಹರಿಯಾಣಕ್ಕೆ ಎಳೆದೊಯ್ದು, ಕಾರಿನಲ್ಲಿ ಕೂಡಿಹಾಕಿ ಕೊಲೆ ಮಾಡಲಾಗಿದ್ದು, ಈಗ ಎರಡು ರಾಜ್ಯಗಳ ನಡುವೆ ತಿಕ್ಕಾಟ ಆರಂಭವಾಗಿದೆ.

ಹರಿಯಾಣ ಪೊಲೀಸರು ರಾಜಸ್ಥಾನ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 30 ರಿಂದ 40 ಅನಾಮಧೇಯ ಪೊಲೀಸರ ವಿರುದ್ಧ ಎಫ್‌ಐಆರ್‌ ಆಗಿದೆ.

ಗೋರಕ್ಷಕರು ಕೊಂದಿದ್ದಾರೆ ಎಂದು ಹೇಳಲಾದ ಇಬ್ಬರು ಮುಸ್ಲಿಮರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಸಂದರ್ಭದಲ್ಲಿ ರಾಜಸ್ಥಾನ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ದೂರು ನೀಡಿದ ಮಹಿಳೆಯ ಮಗನಾಗಿರುವ ಶ್ರೀಕಾಂತ್ ಪಂಡಿತ್, ಈ ಇಬ್ಬರು ಮುಸ್ಲಿಮರ (ನಾಸಿರ್‌ ಮತ್ತು ಜುನೈದ್‌) ಅಪಹರಣ ಮತ್ತು ಹತ್ಯೆಯಲ್ಲಿ ಆರೋಪಿಯಾಗಿದ್ದಾನೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋಸಂರಕ್ಷಣಾ ಗುಂಪಿನ ಸದಸ್ಯನಾಗಿ ಶ್ರೀಕಾಂತ್ ಗುರುತಿಸಿಕೊಂಡಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುತ್ತಿರುವ ಐವರು ಆರೋಪಿಗಳಲ್ಲಿ ಈತನೂ ಒಬ್ಬನಾಗಿದ್ದಾನೆ.

ಶ್ರೀಕಾಂತ್‌ನ ತಾಯಿ ದುಲಾರಿ ದೇವಿ ಅವರು ತಮ್ಮ ದೂರಿನಲ್ಲಿ, “ರಾಜಸ್ಥಾನ ಪೊಲೀಸರು ನನ್ನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದರು. ನನ್ನ ಗರ್ಭಿಣಿ ಸೊಸೆಯ ಹೊಟ್ಟೆಗೆ ಒದ್ದು ಗರ್ಭಪಾತಕ್ಕೆ ಕಾರಣವಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳೊಂದಿಗೆ ಶಸ್ತ್ರಸಜ್ಜಿತ), 149 (ಕಾನೂನುಬಾಹಿರ ಸಭೆ), 354 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ), 452 (ಮನೆ-ಅತಿಕ್ರಮಣ) ಮತ್ತು 312 (ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವಿಯವರು ಮಾಡಿರುವ ಆರೋಪಗಳನ್ನು ರಾಜಸ್ಥಾನ ಪೊಲೀಸರು ನಿರಾಕರಿಸಿದ್ದಾರೆ. “ಮಗುವಿನ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

“ರಾಜಸ್ಥಾನ ಪೊಲೀಸ್‌ ತಂಡದ ಸುಮಾರು 40 ಸಿಬ್ಬಂದಿ ನನ್ನ ಮನೆಗೆ ಬಲವಂತವಾಗಿ ಪ್ರವೇಶಿಸಿ, ನಮ್ಮನ್ನು ನಿಂದಿಸಿದ್ದಾರೆ. ನನ್ನ ಇತರ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ” ಎಂದು ಮಹಿಳೆ ಹೇಳಿಕೆ ನೀಡಿದ್ದಾರೆ.

ಕಳೆದ ವಾರ ಹರಿಯಾಣದಲ್ಲಿ ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಎಸ್‌ಯುವಿಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹರಿಯಾಣದ ನುಹ್‌ನಲ್ಲಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರೆಂಬ ಶಂಕೆಯ ಮೇರೆಗೆ ಗೋರಕ್ಷಣೆಯ ಹೆಸರಿನ ಗೂಂಡಾಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...