Homeಮುಖಪುಟನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ 'ಕಿಮ್‌ ಕಿ ಡುಕ್‌'

ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

ಅವರ ಚಿತ್ರಗಳಲ್ಲಿ ನಿಶ್ಯಬ್ದವನ್ನು ಬಳಸುವ ರೀತಿ ನನ್ನನ್ನು ಸದಾ ಕಾಡಿದೆ. ನನ್ನ ಸಿನಿಮಾಗಳಲ್ಲಿ ಶಬ್ದವಿರುತ್ತದೆ. ಅದೇ ಕಾರಣಕ್ಕೊ ಏನೊ, ಡುಕ್‌ ಅವರ ಚಿತ್ರಗಳಲ್ಲಿ ನಿಶ್ಯಬ್ದವನ್ನು ಬಳಸುವ ರೀತಿಯೇ ಒಂದು ದೊಡ್ಡ ಸಾಧನೆ.

- Advertisement -
- Advertisement -

ನಿನ್ನೆ ನಿಧನರಾದ ದಕ್ಷಿಣ ಕೋರಿಯಾದ ಪ್ರಸಿದ್ಧ ನಿರ್ದೇಶಕ ’ಕಿಮ್‌ ಕಿ ಡುಕ್’‌ ಅವರಿಂದ ಪ್ರಭಾವಿತರಾಗದ ನಿರ್ದೇಶಕರಿಲ್ಲ. ಕನ್ನಡದ ಹೊಸ ತಲೆಮಾರಿನ ನಿರ್ದೇಶಕ ಬಿ ಎಂ ಗಿರಿರಾಜ್‌, ಕಿಮ್‌ ಕಿ ಡುಕ್‌ ಅವರ ಸಿನಿಮಾ ಕಟ್ಟುವ ಬಗೆಯನ್ನು ಮತ್ತು ಅವರ ಮೇಲೆ ಆದ ಪ್ರಭಾವವನ್ನು ನೆನಪಿಸಿಕೊಂಡಿದ್ದಾರೆ.

ನಾನು ಕಿಮ್‌ ಕಿ ಡುಕ್‌ ಸಿನಿಮಾ ಮೊದಲು ನೋಡಿದ್ದು ಅಸೋಸಿಯೇಟ್‌ ಆಗಿ ಕೆಲಸ ಮಾಡುತ್ತಿದ್ದ ದಿನಗಳಲ್ಲಿ. ಸ್ನೇಹಿತರೊಬ್ಬರು ‘ಬ್ರೆತ್‌’ ಎಂಬ ಸಿನಿಮಾ ಬಗ್ಗೆ ಹೇಳಿದ್ದರು. ಅದನ್ನು ಹುಡುಕಿಕೊಂಡು ಬಂದು ನೋಡಿದೆ. ಅದೊಂದು ಫ್ಯಾಸಿನೇಟಿಂಗ್‌ ಸಿನಿಮಾ ಆಗಿತ್ತು. ಚಿತ್ರಕತೆ ತುಂಬಾ ವಿಚಿತ್ರವಾಗಿತ್ತು. ಮರಣದಂಡನೆಗೆ ಶಿಕ್ಷೆಯಾದ ವ್ಯಕ್ತಿಯ ಸುತ್ತ ಹೆಣೆದ ಕತೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿಮ್‌ ಕಿ ಡುಕ್‌ ಅವರ ಸಿನಿಮಾ, ಚಿತ್ರಕತೆ, ಪಾತ್ರಗಳು ಒಂದು ಭಾವ ಸತ್ಯದ ಹುಡುಕಾಟದಲ್ಲಿರುತ್ತವೆ. ನಾವು ಎಲ್ಲವನ್ನು ನೈತಿಕತೆಯ ಚೌಕಟ್ಟಿನಲ್ಲಿ ನೊಡುತ್ತೇವೆ. ಸಮಾಜದಲ್ಲಿ ಇದು ಹೀಗಾಗಬಾರದು, ಇದು ಸರಿಯಲ್ಲ, ತಪ್ಪು ಎಂದೆಲ್ಲಾ ಹೇಳುತ್ತೇವೆ. ಆದರೆ ಕಿಮ್‌ ಕಿ ಡುಕ್‌ ಇದೆಲ್ಲವನ್ನು ಮೀರಿದ ಮಾನವೀಯ ಬೌದ್ಧ ದೃಷ್ಟಿಕೋನದಲ್ಲಿ ಜೀವನ ನೋಡುವುದನ್ನು ಕಾಣುತ್ತೇವೆ.

ಡುಕ್‌ ನಿರ್ದೇಶಿಸಿದ ಮತ್ತೊಂದು ಚಿತ್ರ 3-ಐರನ್‌, ನಾನು ನೋಡಿದ ವಿಶಿಷ್ಟವಾದ ಪ್ರೇಮಕತೆ. ಒಬ್ಬ ವ್ಯಕ್ತಿ ತಾನೊಬ್ಬನೇ ಇರುವಾಗ ಹೇಗೊ ಬದುಕಿಕೊಳ್ತಾನೆ. ಆದರೆ ಹತ್ತು ಜನರ ನಡುವೆ ಬದುಕುವುದು ಸವಾಲು. ಅಲ್ಲಿ ತನ್ನತನ, ವ್ಯಕ್ತಿ ವಿಶೇಷ ಎಂಬುದೇನಿರುತ್ತದೆ, ಅದು ಕಳೆದು ಹೋಗಿ ಬಿಡುವ ಸಾಧ್ಯತೆ ಇರುತ್ತದೆ. ಕಿಮ್‌ ಕಿ ಡುಕ್‌ ಅವರ ಎಲ್ಲ ಸಿನಿಮಾಗಳಲ್ಲಿ ಈ ಎಳೆ ಕಂಡು ಬರುತ್ತದೆ. ಒಂಟಿಯಾಗಿರುವವ, ಸಮಾಜದ ಭಾವವಾಗಿ ಎದುರಿಸುವ ಸಂಕಟಗಳನ್ನು ಧ್ವನಿಸುತ್ತಲೇ ಬಂದಿದ್ದಾರೆ. ಇದು ಸ್ವತಃ ಕಿಮ್‌ ಕಿ ಡುಕ್‌ ಅವರ ಆತಂರಿಕ ಸಂಘರ್ಷವೆನಿಸುತ್ತದೆ.

ವೃತ್ತಿ ಜೀವನದ ಒಂದು ಘಟ್ಟದಲ್ಲಿ ಅವರದ್ದೇ ಒಂದು ಸಾಕ್ಷ್ಯಚಿತ್ರ ಬಂದು. ಅದರಲ್ಲಿ ಸಿನಿಮಾ ಜೀವನದಲ್ಲಿ ತಮ್ಮ ಸಾಧನೆ ಶೂನ್ಯ ಎಂದು ಹೇಳಿಕೊಳ್ಳುತ್ತಾರೆ. ಮಾನಸಿಕ ಒತ್ತಡದಲ್ಲಿದ್ದ ಸಂಧರ್ಭವನ್ನು ಬಿಚ್ಚಿಡುವ ಈ ಸಾಕ್ಷ್ಯಚಿತ್ರದಲ್ಲಿ ದೂರದ ಬೆಟ್ಟದಲ್ಲಿ ಗುಡಿಸಲೊಂದರಲ್ಲಿ ಬದುಕಿದ್ದನ್ನು ಅದರಲ್ಲಿ ವಿವರಿಸಿದ್ದರು. ತಾನೇನೇ ಮಾಡುತ್ತಿದ್ದರೂ, ಅದು ತನ್ನ ಆಡಂಬರವಷ್ಟೇ. ನನ್ನ ಲೆಗಸಿಯಾಗಿ, ಸಿನಿಮಾಕ್ಕಿಂತ ಹತ್ತು ಶಿಷ್ಯರನ್ನು ಬೆಳೆಸಿ ಹೋಗಬೇಕಿತ್ತು. ಅವರೆಲ್ಲರೂ ತಮ್ಮನ್ನು ಮಾರಿಕೊಂಡರು ಎಂಬ ಬೇಸರವನ್ನು ವ್ಯಕ್ತಪಡಿಸಿದ್ದರು.

ಭ್ರಷ್ಟತೆಯ ಬಗ್ಗೆ ಮಧ್ಯಮ ವರ್ಗದ ನಂಬಿಕೆಯನ್ನು ಜನಪ್ರಿಯ ಧಾಟಿಯಲ್ಲಿ ಹೇಳುವ ಆಕ್ಟ್ – 1978

ಈ ಸಾಕ್ಷ್ಯಚಿತ್ರ, ಸ್ವತಃ ಕಿಮ್‌ ಕಿ ಡುಕ್‌ ಕ್ಯಾಮೆರಾ ಎದುರು ಮಾತನಾಡುತ್ತಾ ಹೋಗಿದ್ದಷ್ಟೆ. ಅದನ್ನು ನೋಡಿದ ನನ್ನಂತಹ ಅನೇಕರಿಗೆ, ಆಯ್ತು ಇನ್ನು ಮೇಲೆ ಇವರು ಸಿನಿಮಾ ಮಾಡೋದಿಲ್ಲ ಅನ್ನಿಸಿತ್ತು. ಆದರೆ ಕಿಮ್‌ ಕಿ ಡುಕ್‌ ಮತ್ತೊಂದು ಹೊಸ ಸಿನಿಮಾದೊಂದಿಗೆ ಪ್ರತ್ಯಕ್ಷವಾಗಿದ್ದರು. ಸಿನಿಮಾ ಮಾಡುತ್ತಾ ಖಿನ್ನತೆ ಒಳಗಾಗಿದ್ದ ಡುಕ್‌, ಸಿನಿಮಾ ಮೂಲಕವೇ ಅದರಿಂದ ಹೊರಬರುವ ದಾರಿ ಕಂಡುಕೊಂಡರು. ಸಿನಿಮಾನೇ ಅವರಿಗೆ ಕಾಯಿಲೆ ಆಗಿತ್ತು, ಸಿನಿಮಾನೇ ಅವರಿಗೆ ಮದ್ದಾಯ್ತು. ಕ್ಯಾಪ್ರೊ ಹೇಳ್ತಾರಲ್ಲ, ‘ ಸಿನಿಮಾಕ್ಕೆ ಮದ್ದೆಂದರೆ, ಇನ್ನಷ್ಟು ಸಿನಿಮಾ ಮಾಡೋದು” ಹಾಗೆ.

Getty Images

ಇದನ್ನೂ ಓದಿ: ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

ಬುದ್ಧ ಸಮಾಜದ ಒಳಗೇ ಇದ್ದು, ಸಮಾಜದಲ್ಲಿ ಪರಿವರ್ತನೆಗೆ ಪ್ರಯತ್ನಿಸಿದ್ದು, ಕಿಮ್‌ ಕಿ ಡುಕ್‌ಗೂ ಮನವರಿಕೆ ಆಯ್ತು ಅನ್ನಿಸುತ್ತೆ. ಬುದ್ಧನ ಹಲವು ಚಿಂತನೆಗಳು ಅವರ ಸಿನಿಮಾಗಳಲ್ಲಿ ಕಾಣಿಸುತ್ತವೆ. ಸ್ಪ್ರಿಂಗ್‌, ಸಮ್ಮರ್‌, ಫಾಲ್‌, ವಿಂಟರ್‌ ಆಳ ಪದರಗಳ ಸಿನಿಮಾ ಅದು. ದೃಶ್ಯ ಸೌಂದರ್ಯದಲ್ಲೂ, ಭಾವ ಸೌಂದರ್ಯದಲ್ಲೂ ಹಲವು ವಿಚಾರಗಳನ್ನು ಹೇಳುತ್ತಾರೆ. ಮನುಷ್ಯನ ಕೆಲಸದಿಂದ ಏನೊ ಒಂದು ಕ್ರಿಯೆ ಘಟಿಸುತ್ತಲೇ ಇರುತ್ತದೆ. ಆದರೆ ಏನೂ ಆಗಲ್ಲ ಎಂದು ಭಾವಿಸಿಯೇ ಕೆಲಸ ಮಾಡುತ್ತಿರಬೇಕಾಗುತ್ತದೆ. ಈ ಬೌದ್ಧ ತತ್ವವನ್ನು ಡುಕ್‌ಗಿಂತ ಸೊಗಸಾಗಿ ಇನ್ನಾರು ಸೆರೆಹಿಡಿದಿಲ್ಲ.

ಅಚ್ಚರಿಯ ಸಂಗತಿಯೆಂದರೆ, ಇದು ಧಾರ್ಮಿಕವಲ್ಲದ ಚಿಂತನೆಯೂ ಹೌದು. ಬೌದ್ಧ ಅನುಯಾಯಿ ಆಗುವುದು ಸುಲಭ, ಬುದ್ಧನಾಗುವುದು ಕಷ್ಟ. ಈ ಚಿಂತನೆಗಳು ಡುಕ್‌ ಸಿನಿಮಾದಲ್ಲಿ ತುಂಬಾ ಸೊಗಸಾಗಿ, ಮಾನವೀಯವಾಗಿ ಪ್ರತಿಫಲಿಸುತ್ತವೆ. ಯಾವುದೇ ಸೃಜನಶೀಲ ಸೃಷ್ಟಿಯಲ್ಲಿ, ಸೃಷ್ಟಿ ಮಾಡುವವನು ತನ್ನ ನೈತಿಕತೆಯನ್ನು ಹೇರಿಬಿಡುತ್ತಾನೆ. ಆ ನೈತಿಕತೆ, ಆತನ ಅಹಂ. ಅದಕ್ಕೆ ಶ್ರೇಷ್ಠತೆಯ ಲೇಪ ಹಚ್ಚುತ್ತಿರುತ್ತೇವೆ. ಅದನ್ನು ಮೀರುವುದೇ ಸವಾಲು. ಡುಕ್‌ಗೆ ಮನುಷ್ಯನ ಮೇಲೆ ಅಪಾರವಾದ ಪ್ರೀತಿ ಇತ್ತು. ಆದರೆ ನಂಬಿಕೆ ಇರಲಿಲ್ಲ. ಈ ವೈರುಧ್ಯಗಳ ನಡುವೆ ಹೊಯ್ದಾಟ, ಖಿನ್ನತೆ ಅವರ ಸಿನಿಮಾಗಳಲ್ಲಿ ಕಾಣಿಸುತ್ತದೆ. ಆದರೆ ಅದರಲ್ಲೂ ಯಾವುದೊ ಸೌಂದರ್ಯ, ಸತ್ಯ ಹುಡುಕುವುದಕ್ಕೆ ಪ್ರಯತ್ನಿಸುತ್ತಾ ಇದ್ದರು.

ಅವರ ಚಿತ್ರಗಳಲ್ಲಿ ನಿಶ್ಯಬ್ದವನ್ನು ಬಳಸುವ ರೀತಿ ನನ್ನನ್ನು ಸದಾ ಕಾಡಿದೆ. ನನ್ನ ಸಿನಿಮಾಗಳಲ್ಲಿ ಶಬ್ದವಿರುತ್ತದೆ. ಅದೇ ಕಾರಣಕ್ಕೊ ಏನೊ, ಡುಕ್‌ ಅವರ ಚಿತ್ರಗಳಲ್ಲಿ ನಿಶ್ಯಬ್ದವನ್ನು ಬಳಸುವ ರೀತಿಯೇ ಒಂದು ದೊಡ್ಡ ಸಾಧನೆ. ಅಂತಹ ಪ್ರತಿಭೆಯನ್ನು ಕಳೆದುಕೊಂಡಿದ್ದೇವೆ. ನಿಜಕ್ಕೂ ಕಿಮ್‌ ಕಿ ಡುಕ್‌ ಅವರನ್ನು ಮಿಸ್‌ ಮಾಡಿಕೊಳ್ಳುತ್ತೇನೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...