Homeಮುಖಪುಟಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಶಿವಸೇನೆ ಸಂಸದನ ಸಂಬಂಧಿ ವಿರುದ್ದ ಪ್ರಕರಣ ದಾಖಲಿಸಿ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ಮುಂಬೈ ವಾಯುವ್ಯ ಕ್ಷೇತ್ರದ ಶಿವಸೇನೆ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಮಂಗೇಶ್ ಪಂಡಿಲ್ಕರ್ ಎಂಬಾತನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಅಧಿಕೃತ ಆದೇಶವನ್ನು ಪಾಲಿಸದಿರುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈತ ನಿಷೇಧವಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮತ ಎಣಿಕೆ ಕೇಂದ್ರದ ಅಧಿಕಾರಿ ಗೌರವ್ ದಿನೇಶ್ ಎಂಬವರು ವನ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲೋಕಸಭೆ ಚುನಾವಣೆಗೆ ಶಿವಸೇನೆ (ಏಕನಾಥ್ ಶಿಂಧೆ ಬಣ) ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದ ರವೀಂದ್ರ ವೈಕರ್ 48 ಮತಗಳ ಅಂತರದಿಂದ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಗಜಾನನ್ ಕೃತಿಕಾರ್ ವಿರುದ್ದ ಗೆಲುವು ಸಾಧಿಸಿದ್ದಾರೆ.

ಇವಿಎಂ ಅನ್‌ಲಾಕ್ ಮಾಡಲು ಮೊಬೈಲ್ ಬಳಿಸಿದ ಮಂಗೇಶ್ ಪಂಡಿಲ್ಕರ್?

ಆರೋಪಿ ಮಂಗೇಶ್ ಪಂಡಿಲ್ಕರ್ ಬಳಸಿದ್ದ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿತ್ತು. ಮೊಬೈಲ್ ಬಳಸಿ ಆತನ ಇವಿಎಂ ಅನ್‌ಲಾಕ್ ಮಾಡಲು ಒಟಿಪಿ ಜನರೇಟ್ ಮಾಡಿದ್ದಾನೆ ಎಂದು ಮಿಡ್‌-ಡೇ ಪತ್ರಿಕೆ ವರದಿ ಮಾಡಿದೆ. ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದ ನೆಸ್ಕೋ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ.

“ಮತ ಎಣಿಕೆ ಕೇಂದ್ರದಲ್ಲಿ ಬಳಸಿದ ಮೊಬೈಲ್ ಫೋನ್‌ನ ಡೇಟಾ ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್ ಫೋನ್ ಅನ್ನು ಬೇರೆ ಯಾವುದಕ್ಕೆಲ್ಲ ಬಳಸಲಾಗಿದೆ ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವನ್ರೈ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾಗಿ ಉಲ್ಲೇಖಿಸಿ ಮಿಡ್-ಡೇ ವರದಿ ಮಾಡಿದೆ.

ಮಿಡ್-ಡೇ ವರದಿ ಭಾನುವಾರ (ಜೂನ್ 16) ವೈರಲ್ ಆಗಿದ್ದು, ಅನೇಕ ವಿರೋಧ ಪಕ್ಷದ ನಾಯಕರು ” ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ”ಯನ್ನು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಇವಿಎಂಗಳು ಕಪ್ಪು ಪೆಟ್ಟಿಗೆ (Black Box)ಯಾಗಿದೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಿಗೆ ಹೊಣೆಗಾರಿಕೆ ಇಲ್ಲದಿದ್ದಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ” ಎಂದಿದ್ದಾರೆ.

“ಎನ್‌ಡಿಎ ಅಭ್ಯರ್ಥಿ ಸಂಬಂಧಿಕರೊಬ್ಬರ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿದ್ದು ಏಕೆ? ಮತ ಎಣಿಕೆ ನಡೆಯುವ ಸ್ಥಳಕ್ಕೆ ಮೊಬೈಲ್ ಫೋನ್ ಹೇಗೆ ತಲುಪಿತು?” ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪ್ರಶ್ನಿಸಿದೆ.

“ಚುನಾವಣಾ ಆಯೋಗ ಸಂಪೂರ್ಣ ರಾಜಿಯಾಗಿದೆ. ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ನನ್ನ ಪ್ರಕಾರ, ಇಲ್ಲಿ ಮತ್ತೊಂದು ಚಂಡೀಗಢದ ಕೃತ್ಯವನ್ನು ಮರೆ ಮಾಚಲಾಗುತ್ತಿದೆ. ಒಮ್ಮೆ ದೇಶದ್ರೋಹಿಯಾದರೆ, ಯಾವಾಗಲೂ ದೇಶದ್ರೋಹಿಯೇ” ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ : ಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...