Homeಮುಖಪುಟಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಇವಿಎಂ ಅನ್‌ಲಾಕ್‌ ಮಾಡಲು ಮೊಬೈಲ್ ಬಳಸಿದ ಶಿವಸೇನೆ ಸಂಸದನ ಸಂಬಂಧಿ?

ಶಿವಸೇನೆ ಸಂಸದನ ಸಂಬಂಧಿ ವಿರುದ್ದ ಪ್ರಕರಣ ದಾಖಲಿಸಿ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ಮುಂಬೈ ವಾಯುವ್ಯ ಕ್ಷೇತ್ರದ ಶಿವಸೇನೆ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಮಂಗೇಶ್ ಪಂಡಿಲ್ಕರ್ ಎಂಬಾತನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಅಧಿಕೃತ ಆದೇಶವನ್ನು ಪಾಲಿಸದಿರುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈತ ನಿಷೇಧವಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮತ ಎಣಿಕೆ ಕೇಂದ್ರದ ಅಧಿಕಾರಿ ಗೌರವ್ ದಿನೇಶ್ ಎಂಬವರು ವನ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲೋಕಸಭೆ ಚುನಾವಣೆಗೆ ಶಿವಸೇನೆ (ಏಕನಾಥ್ ಶಿಂಧೆ ಬಣ) ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದ ರವೀಂದ್ರ ವೈಕರ್ 48 ಮತಗಳ ಅಂತರದಿಂದ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಗಜಾನನ್ ಕೃತಿಕಾರ್ ವಿರುದ್ದ ಗೆಲುವು ಸಾಧಿಸಿದ್ದಾರೆ.

ಇವಿಎಂ ಅನ್‌ಲಾಕ್ ಮಾಡಲು ಮೊಬೈಲ್ ಬಳಿಸಿದ ಮಂಗೇಶ್ ಪಂಡಿಲ್ಕರ್?

ಆರೋಪಿ ಮಂಗೇಶ್ ಪಂಡಿಲ್ಕರ್ ಬಳಸಿದ್ದ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿತ್ತು. ಮೊಬೈಲ್ ಬಳಸಿ ಆತನ ಇವಿಎಂ ಅನ್‌ಲಾಕ್ ಮಾಡಲು ಒಟಿಪಿ ಜನರೇಟ್ ಮಾಡಿದ್ದಾನೆ ಎಂದು ಮಿಡ್‌-ಡೇ ಪತ್ರಿಕೆ ವರದಿ ಮಾಡಿದೆ. ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದ ನೆಸ್ಕೋ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ.

“ಮತ ಎಣಿಕೆ ಕೇಂದ್ರದಲ್ಲಿ ಬಳಸಿದ ಮೊಬೈಲ್ ಫೋನ್‌ನ ಡೇಟಾ ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಮೊಬೈಲ್ ಫೋನ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಮೊಬೈಲ್ ಫೋನ್ ಅನ್ನು ಬೇರೆ ಯಾವುದಕ್ಕೆಲ್ಲ ಬಳಸಲಾಗಿದೆ ಎಂದು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವನ್ರೈ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾಗಿ ಉಲ್ಲೇಖಿಸಿ ಮಿಡ್-ಡೇ ವರದಿ ಮಾಡಿದೆ.

ಮಿಡ್-ಡೇ ವರದಿ ಭಾನುವಾರ (ಜೂನ್ 16) ವೈರಲ್ ಆಗಿದ್ದು, ಅನೇಕ ವಿರೋಧ ಪಕ್ಷದ ನಾಯಕರು ” ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ”ಯನ್ನು ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಇವಿಎಂಗಳು ಕಪ್ಪು ಪೆಟ್ಟಿಗೆ (Black Box)ಯಾಗಿದೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಿಗೆ ಹೊಣೆಗಾರಿಕೆ ಇಲ್ಲದಿದ್ದಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ” ಎಂದಿದ್ದಾರೆ.

“ಎನ್‌ಡಿಎ ಅಭ್ಯರ್ಥಿ ಸಂಬಂಧಿಕರೊಬ್ಬರ ಮೊಬೈಲ್ ಫೋನ್ ಇವಿಎಂಗೆ ಸಂಪರ್ಕಗೊಂಡಿದ್ದು ಏಕೆ? ಮತ ಎಣಿಕೆ ನಡೆಯುವ ಸ್ಥಳಕ್ಕೆ ಮೊಬೈಲ್ ಫೋನ್ ಹೇಗೆ ತಲುಪಿತು?” ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪ್ರಶ್ನಿಸಿದೆ.

“ಚುನಾವಣಾ ಆಯೋಗ ಸಂಪೂರ್ಣ ರಾಜಿಯಾಗಿದೆ. ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ನನ್ನ ಪ್ರಕಾರ, ಇಲ್ಲಿ ಮತ್ತೊಂದು ಚಂಡೀಗಢದ ಕೃತ್ಯವನ್ನು ಮರೆ ಮಾಚಲಾಗುತ್ತಿದೆ. ಒಮ್ಮೆ ದೇಶದ್ರೋಹಿಯಾದರೆ, ಯಾವಾಗಲೂ ದೇಶದ್ರೋಹಿಯೇ” ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ : ಯುಎಸ್ ಕಂಪನಿಗೆ ಕೇಂದ್ರದ ನೆರವು: ಮಾತು ಬದಲಿಸಿದ ಸಚಿವ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...