Homeಮುಖಪುಟಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ

- Advertisement -
- Advertisement -

ಗುಜರಾತಿನ ವಡೋದರದ ಖಾಸಗಿ ಶಾಲೆಯು ಶಿಶುವಿಹಾರದ ಮಕ್ಕಳಿಗೆ ನಗರದ ಮಸೀದಿಗೆ ಪ್ರವಾಸವನ್ನು ಯೋಜಿಸಿತ್ತು. ಆದರೆ ಬಿಜೆಪಿ ಬೆಂಬಲಿತ ಭಜರಂಗದಳದ ದುಷ್ಕರ್ಮಿಗಳ ಪ್ರತಿಭಟನೆಯ ಕಾರಣಕ್ಕೆ ಈ ಪ್ರವಾಸವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಮಸೀದಿ ಪ್ರವಾಸದ ಬಗ್ಗೆ ಪೋಷಕರು “ದೂರು ನೀಡಿದ್ದಾರೆ” ಎಂದು ಪ್ರತಿಪಾದಿಸಿರುವ ಬಜರಂಗದಳದ ದುಷ್ಕರ್ಮಿಗಳು ಶಾಲೆಗೆ ತೆರಳಿ ಮಕ್ಕಳನ್ನು ಮಸೀದಿಗೆ ಕರೆದೊಯ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಹಾಕಿದ್ದಾರೆ.

ವಡೋದರದ ಕಲಾಲಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಈ ಹಿಂದೆ ನಗರದ ದೇವಸ್ಥಾನಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿತ್ತು. ಈ ವಾರ ಮೌಲ್ಯ ಶಿಕ್ಷಣಕ್ಕಾಗಿ ಕ್ಷೇತ್ರ ಭೇಟಿಯ ಭಾಗವಾಗಿ ಶಿಶುವಿಹಾರದ ಮಕ್ಕಳನ್ನು ಮಸೀದಿಗೆ ಕರೆದೊಯ್ಯಲು ಯೋಜಿಸಿತ್ತು. ಆದರೆ, ಮಂಗಳವಾರ ಬಜರಂಗದಳದ ದುಷ್ಕರ್ಮಿಗಳು ಶಾಲಾ ಆವರಣಕ್ಕೆ ತೆರಳಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಅವರು ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಿ, ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸದಿದ್ದರೆ ಆಂದೋಲನ ನಡೆಸುವುದಾಗಿ ‘ಎಚ್ಚರಿಕೆ’ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡೋದರಾದ ಬಜರಂಗದಳದ ಅಧ್ಯಕ್ಷ ಕೇತನ್ ತ್ರಿವೇದಿ, “ಮಸೀದಿಗೆ ಕ್ಷೇತ್ರ ಪ್ರವಾಸವನ್ನು ರದ್ದುಗೊಳಿಸಬೇಕು ಎಂದು ನಾವು ಶಾಲೆಯ ಪ್ರಾಂಶುಪಾಲರಿಗೆ ಹೇಳಿದ್ದೇವೆ…ಶಿಕ್ಷಣದೊಂದಿಗೆ ಧರ್ಮವನ್ನು ಬೆರೆಸುವ ಅಗತ್ಯವಿಲ್ಲ. ಅವರು ಚಿಕ್ಕ ಮಕ್ಕಳನ್ನು ಮಸೀದಿಗಳಿಗೆ ಕರೆದೊಯ್ಯುವ ಬದಲು ಪೂಜಾ ಸ್ಥಳಗಳನ್ನು ತೋರಿಸಲು ವರ್ಚುವಲ್ ತಂತ್ರಜ್ಞಾನವನ್ನು ಬಳಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?

“ಧರ್ಮದ ಹೆಸರಿನಲ್ಲಿ ತನ್ನ ಶಾಲೆಗೆ ಕೆಟ್ಟ ಹೆಸರು ಬರಬಾರದು. ಇದನ್ನು ಪರಿಗಣಿಸುವ ಬಗ್ಗೆ ನಾವು ಪ್ರಾಂಶುಪಾಲರಿಗೆ ಬಿಟ್ಟಿದ್ದೇವೆ… ಈ ಬಗ್ಗೆ ಪೋಷಕರು ನಮಗೆ ದೂರಿಕೊಂಡಿದ್ದು, ಹೀಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅವರು ಮಕ್ಕಳನ್ನು ಮಸೀದಿಗೆ ಕರೆದೊಯ್ಯಬೇಕಾಗಿದ್ದ ಗೊತ್ತುಪಡಿಸಿದ ದಿನದಂದು ನಾವು ಮತ್ತೆ ಶಾಲೆಗೆ ಬರಲಿದ್ದು, ಒಂದು ವೇಳೆ ನಮ್ಮ ಎಚ್ಚರಿಕೆ ಪಾಲಿಸದಿದ್ದರೆ, ನಾವು ಆಂದೋಲನ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಶಾಲೆಯು ಕಳೆದ ವಾರ ಪೋಷಕರಿಗೆ ಒಪ್ಪಿಗೆ ಪತ್ರವನ್ನು ನೀಡಿ, ತಮ್ಮ ಮಗುವನ್ನು ನಗರದ ಮಸೀದಿಗೆ ಭೇಟಿ ನೀಡಲು ಸ್ವಯಂಪ್ರೇರಿತ ಅನುಮತಿಯನ್ನು ಕೋರಿತ್ತು. ಫೀಲ್ಡ್ ಟ್ರಿಪ್‌ಗೆ ತಮ್ಮ ಮಕ್ಕಳನ್ನು ಕಳುಹಿಸಲು ಬಯಸುವ ಎಲ್ಲಾ ಪೋಷಕರು ಒಪ್ಪಿಗೆಯಲ್ಲಿ ಫಾರ್ಮ್ ಅನ್ನು ಹಿಂತಿರುಗಿಸಿದ್ದಾರೆ ಎಂದು ಶಾಲೆ ತಿಳಿಸಿದೆ.

ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಬೇಕೆ ಅಥವಾ ಬೇಡವೆ ಎಂಬುದು ಪೋಷಕರ ಆಯ್ಕೆಯಾಗಿರುವುದರಿಂದ ಯಾವುದೇ ಪೋಷಕರಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ಬಂದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಯೋಜಿಸಲಾದ ಕ್ಷೇತ್ರ ಭೇಟಿಗಳ ಪಟ್ಟಿಯನ್ನು ಶಾಲೆಯು ಎಲ್ಲಾ ಪೋಷಕರಿಗೆ ಮುಂಚಿತವಾಗಿ ಹಸ್ತಾಂತರಿಸಿದೆ. ಈ ಧಾರ್ಮಿಕ ಪೂಜಾ ಸ್ಥಳಗಳ ಭೇಟಿಯಲ್ಲಿ ಚರ್ಚ್‌ಗೆ ಭೇಟಿ ನೀಡುವುದು ಕೂಡಾ ಒಳಗೊಂಡಿದೆ. ಇತರ ಕ್ಷೇತ್ರ ಪ್ರವಾಸಗಳ ಅಂಗವಾಗಿ ಬ್ಯಾಂಕ್, ಬೇಕರಿ ಮತ್ತು ಕಿರಾಣಿ ಅಂಗಡಿಗೆ ಭೇಟಿ ನೀಡುತ್ತವೆ ಎಂದು ಶಾಲೆ ಹೇಳಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

“ನಮ್ಮ ಗುಂಪುಗಳಲ್ಲಿ ನಮಗೆ ತಿಳಿದಿರುವ ಬಹುತೇಕ ಎಲ್ಲಾ ಪೋಷಕರು ಒಪ್ಪಿಗೆಯ ನಮೂನೆಗಳಿಗೆ ಸ್ವಇಚ್ಛೆಯಿಂದ ಸಹಿ ಮಾಡಿದ್ದಾರೆ. ನಾವೆಲ್ಲರೂ ನಮ್ಮ ಮಕ್ಕಳು ಜಗತ್ತನ್ನು ಅನ್ವೇಷಿಸಲು ಮತ್ತು ಕಲಿಯಲು ಎದುರು ನೋಡುತ್ತಿದ್ದೇವೆ. ಪೂಜಾಸ್ಥಳದ ಭೇಟಿ ನೀಡುವ ಶಾಲೆಯ ಯೋಜನೆಯ ಬಗ್ಗೆ ಯಾವುದೇ ತಪ್ಪು ಇಲ್ಲ” ಎಂದು ಶಿಶುವಿಹಾರದ ವಿದ್ಯಾರ್ಥಿಯ ಪೋಷಕರೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಹಿಂದೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಕ್ಕಳು ಸಂತೋಷಪಟ್ಟರು. ಅದೇ ರೀತಿ ಈ ಪ್ರವಾಸದಲ್ಲಿ ಅವರು ಇನ್ನೊಂದು ಪೂಜಾ ಸ್ಥಳದ ಬಗ್ಗೆ ತಿಳಿದುಕೊಳ್ಳಬಹುದು. ಇದು ತುಂಬಾ ನಿರಾಶಾದಾಯಕವಾಗಿದ್ದು, ಕೆಲವು ಫ್ರಿಂಜ್ ಗುಂಪುಗಳು ಪೋಷಕರು ಮತ್ತು ಶಾಲೆಯ ನಡುವೆ ಮಾತ್ರ ಇರಬೇಕಾದ ವಿಷಯಗಳ ಬಗ್ಗೆ ಪ್ರತಿಭಟಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಶಿಶುವಿಹಾರದ ವಿದ್ಯಾರ್ಥಿಯ ಮತ್ತೊಬ್ಬ ಪೋಷಕರೊಬ್ಬರು, “ನನ್ನ ಮಗಳು ಈ ಪ್ರವಾಸಕ್ಕಾಗಿ ತುಂಬಾ ಉತ್ಸುಕಳಾಗಿದ್ದಳು. ನಾವು ಮಸೀದಿಯ ಬಗ್ಗೆ ಅವಳಿಗೆ ಹೇಳುತ್ತಿದ್ದೆವು. ಇದು ಕೇವಲ ಕ್ಷೇತ್ರ ಪ್ರವಾಸವಾಗಿದೆ ಮತ್ತು ಪೋಷಕರಾಗಿ ಅದನ್ನು ನಾವು ಬೆಂಬಲಿಸಿದ್ದೇವೆ. ಮಕ್ಕಳಿಗೆ ಸಾಮರಸ್ಯ ಮತ್ತು ಏಕತೆಯ ಮೌಲ್ಯಗಳನ್ನು ಕಲಿಸಲು ಶಾಲೆ ಪ್ರಯತ್ನಿಸುತ್ತಿದೆ. ಯಾವುದೇ ಚಟುವಟಿಕೆ ಅಥವಾ ಕ್ಷೇತ್ರ ಪ್ರವಾಸಕ್ಕೆ ಮಕ್ಕಳನ್ನು ಕಳುಹಿಸುವಂತೆ ಪೋಷಕರ ಮೇಲೆ ಯಾವುದೇ ಒತ್ತಡ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಈ ಬಗ್ಗೆ ಶಾಲೆಯ ಪ್ರಿನ್ಸಿಪಾಲ್ ಎ.ಕೆ.ಸಿನ್ಹಾ ಅವರು ಮಾತನಾಡಿ, “ಪ್ರತಿಭಟನಾ ಗುಂಪಿನ ಕಾರ್ಯಕರ್ತರನ್ನು ಭೇಟಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಯ ಪ್ರಮುಖ ಆದ್ಯತೆಯಾಗಿದೆ. ಈಗಿನಿಂದಲೆ ಆಗಸ್ಟ್ ತಿಂಗಳಲ್ಲಿ ಶಾಲೆಯು ಆಯೋಜಿಸಿದ ಎಲ್ಲಾ ಕ್ಷೇತ್ರ ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...