Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...