Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...