Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....