Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...