Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...