Homeಕರ್ನಾಟಕಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

- Advertisement -
- Advertisement -

ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಸಿಐಡಿ ಎಸ್‌.ಪಿ. ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾಗಿ ವರದಿಯಾಗಿದ್ದು, ಅವರನ್ನು ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ದಿವ್ಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ 18ನೇ ಆರೋಪಿಯಾಗಿದ್ದಾರೆ. ದಿವ್ಯಾ ಪತಿ ರಾಜೇಶ ಹಾಗರಗಿಯನ್ನು ಈ ಹಿಂದೆ ಬಂಧಿಸಲಾಗಿದ್ದು, ಆದರೆ ದಿವ್ಯ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ದಿವ್ಯಾ ಜೊತೆಗೆ ಬಂಧಿತರಾದವರನ್ನು, ದಿವ್ಯಾ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಅದೇ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಿವ್ಯಾ ಕಲಬುರಗಿಯಲ್ಲಿ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ಕಲಬುರಗಿ ಬಿಜೆಪಿಯ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಘಟನೆ ಬೆಳಕಿಗೆ ಬಂದ ನಂತರ ಪಕ್ಷ ಅವರಿಂದ ಅಂತರ ಕಾಪಾಡಿಕೊಂಡು, ಆಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಕ್ಷೇತ್ರ ಮರು ವಿಂಗಡಣೆ: ಹಿಂದೂಗಳು ಹೆಚ್ಚಿರುವ ಜಮ್ಮುವಿನಲ್ಲಿ 6 ಹೆಚ್ಚು ಕ್ಷೇತ್ರ ಸೃಷ್ಟಿ, ಮುಸ್ಲಿಮರು ಹೆಚ್ಚಿರುವ ಕಾಶ್ಮೀರಕ್ಕೆ ಕೇವಲ ಒಂದು!

ಆದಾಗ್ಯೂ, ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪಕ್ಷದಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ನೇಮಕಾತಿ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಫೆಬ್ರವರಿಯಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದಿವ್ಯಾ ಅವರನ್ನು ಭೇಟಿ ಮಾಡಿದ್ದರು.

ವೀರೇಶ್ ಎಂಬ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಯಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದರೂ 121 ಅಂಕಗಳನ್ನು ಪಡೆದಿದ್ದು ಬೆಳಕಿಗೆ ಬಂದ ನಂತರ ಸಿಐಡಿ ತನಿಖೆಯಲ್ಲಿ ದಿವ್ಯಾ ಹೆಸರು ಕೇಳಿ ಬಂದಿತ್ತು. ಅವರ ಪರೀಕ್ಷಾ ಕೇಂದ್ರ ಜ್ಞಾನ ಜ್ಯೋತಿ ಸಂಸ್ಥೆಯಾಗಿತ್ತು. ಪರೀಕ್ಷೆಯಲ್ಲಿ ವೀರೇಶ್ 7ನೇ ರ್‍ಯಾಂಕ್‌ ಪಡೆದಿದ್ದರು, ಆದರೆ ತನಿಖೆ ವೇಳೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ದಿವ್ಯಾ ಅವರ ಸಂಸ್ಥೆಯಲ್ಲಿ ಹಲವಾರು ಅಭ್ಯರ್ಥಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದ ಮಾಡಿದೆ.

ವಾಸ್ತವವಾಗಿ, ಸ್ಥಳೀಯ ಸಾರ್ವಜನಿಕ ಶಿಕ್ಷಣ ನಿರ್ದೇಶಕರು ದಿವ್ಯಾ ಅವರ ಸಂಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪರೀಕ್ಷೆಗಳನ್ನು ನಡೆಸದಂತೆ ಶಿಫಾರಸು ಮಾಡಿದ್ದರು. ಅದಾಗಿಯೂ ಪೊಲೀಸ್ ನೇಮಕಾತಿ ವಿಭಾಗವು ಅದೇ ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿತ್ತು. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೂಡಾ ಕಾರ್ಯನಿರ್ವಹಿಸಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ:  ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. ಒತ್ತಡ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರವು ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಪ್ರಕರಣ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.

ಈ ಮಧ್ಯೆ, ಸ್ಥಳೀಯ ನ್ಯಾಯಾಲಯ ದಿವ್ಯಾ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿ, ವಾರದಲ್ಲಿ ಶರಣಾಗಲು ಸೂಚಿಸಿತ್ತು. ಒಂದು ವೇಳೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನೂ ನೀಡಿತ್ತು.

ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ, ಅವರ ಸಹೋದರ ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ, ದಿವ್ಯಾ ಪತಿ ರಾಜೇಶ ಹಾಗರಗಿ ಸೇರಿದಂತೆ ಅಭ್ಯರ್ಥಿಗಳು, ಮೇಲ್ವಿಚಾರಕಿಯರು, ಸರ್ಕಾರಿ ಮಹಿಳಾ ಸಿಬ್ಬಂದಿ ಸೇರಿದಂತೆ 17 ಜನರನ್ನು ಸಿಐಡಿ ಪೊಲೀಸರು ಈ ವರೆಗೆ ಬಂಧಿಸಿದ್ದರು. ಆ ಪೈಕಿ ಏಳು ಅಭ್ಯರ್ಥಿಗಳು ಸಿಐಡಿ ವಶದಲ್ಲಿದ್ದಾರೆ ಎಂದು ಪ್ರಜಾವಾಣಿ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ  

545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ 54,041 ವಿದ್ಯಾರ್ಥಿಗಳು ಹಾಜರಾಗಿದ್ದು, ಜನವರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಿಎಸ್‌ಐ ಹಗರಣದಲ್ಲಿ ಹೊರಬೀಳುತ್ತಿರುವ ವಿವರಗಳು ನಾಡಿನ ನಾಗರಿಕ ಸಮಾಜವನ್ನು ದಿಘ್ಬ್ರಾಂತಗೊಳಿಸಿದೆ. ಇದು ಒಂದು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತವಾದ ವಿಷಯ ಎನ್ನಿಸುವುದಿಲ್ಲ! ಬದಲಿಗೆ, ದೊಡ್ಡ ಮಟ್ಟದ, ಹಿರಿಯ ವಲಯ ಶಾಮೀಲಾಗಿ ಮಾಡಿದ ದುಸ್ಸಾಹಸ ಎನ್ನಿಸುತ್ತದೆ. ಇಂತಹ ಅಭ್ಯರ್ಥಿಗಳಿಂದ ಸಮಾಜ ಏನನ್ನು ನಿರೀಕ್ಷೆ ಮಾಡಬಹುದು? ನಿಜಕ್ಕೂ ದಿಗಿಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...