Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...