Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...