Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...