Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...