Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...