Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...