Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...