Homeಕರ್ನಾಟಕಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ - ಸಚಿವ ಪ್ರಿಯಾಂಕ್ ಖರ್ಗೆ

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಅಧ್ಯಕ್ಷ, ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಪ್ರಿಯಾಂಕ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದೆಡೆಗಿನ ನಮ್ಮ ಸರ್ಕಾರದ ಕಠಿಣ ನಿಲುವಿಗೆ ಹಾಗೂ ಜನರ ತೆರೆಗೆ ಹಣದ ದುರ್ಬಳಕೆಯನ್ನು ತಡೆಯುವ ನಮ್ಮ ಪ್ರಯತ್ನಕ್ಕೆ ಬಿಜೆಪಿಯವರು ‘ಕಿರುಕುಳ’ ಎಂದು ಹೆಸರು ಕೊಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ. ಪಾರದರ್ಶಕತೆಯು ಭ್ರಷ್ಟರಿಗೆ ಕಿರುಕುಳದಂತೆ ಭಾಸವಾಗುವುದು ಸಹಜವೇ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂದು ಕಿಯೋನಿಕ್ಸ್ ಸರಬರಾಜುದಾರರ ಬಿಲ್ ಬಾಕಿ ಉಳಿದಿದೆ ಎಂದರೆ ಅದಕ್ಕೆ ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು, ಬೊಮ್ಮಯಿಯವರು ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರೇ ನೇರ ಕಾರಣ. ಜನಸಾಮಾನ್ಯರ ಬೆವರಿನ ನೂರಾರು ಕೋಟಿ ತೆರಿಗೆ ಹಣದ ಪ್ರತಿ ರೂಪಾಯಿಗೂ ಸಮರ್ಪಕ ಲೆಕ್ಕ ಇಡುವುದು ನಮ್ಮ ಹೊಣೆ ಮತ್ತು ಅತ್ಯಗತ್ಯದ ಕರ್ತವ್ಯ, ಆ ಕರ್ತವ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ಟೆಸ್ಟ್ ಆಡಿಟ್ ತಪಾಸಣೆ ವರದಿಯಲ್ಲೆ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

ಕಿಯೊನಿಕ್ಸ್‌ ಸಂಸ್ಥೆಯಲ್ಲಿ 2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ವಿವರವಾದ ಆಡಿಟ್ ತಪಾಸಣೆ ವರದಿಯಂತೆ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಿಯೊನಿಕ್ಸ್‌ ಸಂಸ್ಥೆಯ ಅಧ್ಯಕ್ಷ ಶರತ್‌ ಬಚ್ಚೇಗೌಡ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಿಯೊನಿಕ್ಸ್‌ ಸಂಸ್ಥೆ ಆದೇಶ ನೀಡಿದ್ದ 1544 ಕೋಟಿ ರೂ. ಗಳಿಗೆ ಸಂಬಂಧಿಸಿದಂತೆ ಸುಮಾರು 1200 ಸಂಗ್ರಹಣೆಗಳಲ್ಲಿ ಅಕೌಂಟೆಂಟ್ ಜನರಲ್ ಕಚೇರಿಯು 45 ಸಂಗ್ರಹಣೆಗಳನ್ನು ಪ್ರಾಯೋಗಿಕವಾಗಿ ಆಡಿಟ್‌ ತಪಾಸಣೆಗೆ ಒಳಪಡಿಸಿದ್ದು, 455 ಕೋಟಿ ರೂ. ಮೌಲ್ಯದ ಉಲ್ಲಂಘನೆಗಳು ಕಂಡು ಬಂದಿವೆ ಎಂದು ಅವರು ಹೇಳಿದ್ದಾರೆ.

2018-2023ರ ನಡುವೆ ನಡೆದ ವಹಿವಾಟುಗಳನ್ನು ಸಮಗ್ರ ತನಿಖೆಗೆ ಒಳಪಡಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರರಾವ್‌ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ರೂಪಾಯಿಯನ್ನೂ ಪ್ರಾಮಾಣಿಕವಾಗಿ ವಿನಿಯೋಗಿಸುತ್ತೇವೆ ಎಂಬ ಭರವಸೆಯಿಂದ ನಾಡಿನ ಜನತೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆಯೇ ಹೊರತು ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುವುದಕ್ಕಲ್ಲ,
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವ್ಯವಹಾರ ನಡೆದಿರುವುದಾಗಿ ಆಡಿಟ್ ಪರಿಶೀಲನೆಯಲ್ಲಿ ಆಕ್ಷೇಪಣೆ ಕಂಡುಬಂದಿರುವುದರಿಂದ ಸಮಗ್ರ ತನಿಖೆಯಾಗಬೇಕಿದೆ. ಕಿಯೋನಿಕ್ಸ್ ವೆಂಡರ್ ಗಳಿಗೆ ಏನಾದರೂ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿಯ ಭ್ರಷ್ಟಾಚಾರ ಕಾರಣವೇ ಹೊರತು ನಾವಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂಓದಿ:  ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...