Homeಮುಖಪುಟಸೂರ್ಯ ಓಂ ಎಂದು ಜಪಿಸುವ ನಕಲಿ ವಿಡಿಯೋ ಟ್ವೀಟ್‌ ಮಾಡಿ ಟ್ರೋಲ್‌ಗೊಳಗಾದ ಕಿರಣ್‌ ಬೇಡಿ...

ಸೂರ್ಯ ಓಂ ಎಂದು ಜಪಿಸುವ ನಕಲಿ ವಿಡಿಯೋ ಟ್ವೀಟ್‌ ಮಾಡಿ ಟ್ರೋಲ್‌ಗೊಳಗಾದ ಕಿರಣ್‌ ಬೇಡಿ…

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ, ಹಲವು ವಾಟ್ಸಾಪ್‌ ಗುಂಪುಗಳಲ್ಲಿ ನಕಲಿ ಸುದ್ದಿಗಳು ಹರಡುತ್ತವೆ. ಬಹಳಷ್ಟು ಜನರು ಆಕರ್ಷಕವಾಗಿರುವ ಆ ವೀಡಿಯೊಗಳು ಮತ್ತು ಸಂದೇಶಗಳ ನಕಲಿ ಸುದ್ದಿಗಳಿಗೆ ಬಲಿಯಾಗುತ್ತಾರೆ. ಈ ವಾಟ್ಸಾಪ್ ವಿಶ್ವವಿದ್ಯಾಲಯದ ಇತ್ತೀಚಿನ ಬಲಿಪಶು ಕಿರಣ್ ಬೇಡಿ ಆಗಿದ್ದಾರೆ..

ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್‌ ಬೇಡಿ, ಇಂದು ಬೆಳಿಗ್ಗೆ ಸೂರ್ಯ ’ಓಂ’ ಎಂದು ಜಪಿಸುವ ನಕಲಿ ವಿಡಿಯೋ ಟ್ವೀಟ್‌ ಮಾಡಿ ಸಕತ್‌ ಟ್ರೋಲ್‌ಗೊಳಗಾಗಿದ್ದಾರೆ..

ಕಿರಣ್ ಬೇಡಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸೂರ್ಯ ಓಂ ಎಂದು ಜಪಿಸುತ್ತದೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದು. ಅದರಲ್ಲಿ ‘ನಾಸಾ ದಾಖಲಿಸಿದೆ’ ಎಂದು ಸಹ ಬರೆಯಲಾಗಿದೆ. ಈ ಸುಳ್ಳು ಸುದ್ದಿಯನ್ನು ಸುಮಾರು 23ಸಾವಿರ ಜನ ಲೈಕ್‌ ಮಾಡಿದರೆ ಸುಮಾರ್‌ 7 ಸಾವಿರ ಜನ ಹಂಚಿಕೊಂಡಿದ್ದಾರೆ.

ಅದೇ ಸಂದರ್ಭದಲ್ಲಿ ಕಿರಣ್‌ ಬೇಡಿಯವರ ಈ ಅಜ್ಞಾನಕ್ಕೆ ಬಹಳಷ್ಟು ಜನ ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಹಲವರು ಟ್ರೋಲ್‌ ಮಾಡಿದ್ದಾರೆ. ಆದರೆ ಇನ್ನು ಸಹ ಕಿರಣ್‌ ಬೇಡಿಯವರು ಆ ಟ್ವೀಟ್‌ ಅನ್ನು ಅಳಿಸಿಲ್ಲ.

“ಒಂದು ಕಾಲದಲ್ಲಿ ಭಾರತದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ವ್ಯಕ್ತಿಯಿಂದ ಇಂತಹ ಅಸಂಬದ್ಧ ಮತ್ತು ಮೂಢನಂಬಿಕೆ ಬರುತ್ತಿರುವುದು ನಾಚಿಕೆಗೇಡಿನ ಸಂಗತಿ. ಭಾರತೀಯ ಸಂವಿಧಾನದಲ್ಲಿ (ವಿಧಿ 51 ಎ), ನಮಗೆ ಒಂದಷ್ಟು ಮೂಲಭೂತ ಕರ್ತವ್ಯಗಳನ್ನು ವಿಧಿಸಿದೆ. ಅದರಲ್ಲಿ ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಅಭಿವೃದ್ಧಿಪಡಿಸುವುದು ಮುಖ್ಯವಾಗಿ ಇದನ್ನು ಪಾಲಿಸುವುದು ಇದು ಭಾರತದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿರುತ್ತದೆ” ಎಂದು ಯುವ ಚಿಂತಕ ಧೃವ್‌ರಾಠೀ ಕಿರಣ್‌ ಬೇಡಿ ಸಂವಿಧಾನದ ಪಾಠ ಮಾಡಿದ್ದಾರೆ.

ಬಹಳಷ್ಟು ಜನ ಅಧಿಕೃತವಾಗಿ ನಾಸಾ ರೆಕಾರ್ಡ್‌ ಮಾಡಿರುವ ಸೌಂಡ್‌ ಅನ್ನು ಪೋಸ್ಟ್‌ ಮಾಡಿದ್ದಾರೆ. ಕೆಳಗಿನ ವಿಡಿಯೋ ನೋಡಿ..

ನೀವು ನಾಗರಿಕ ಸೇವಾ ಪರೀಕ್ಷೆಯಲ್ಲಿ ಹೇಗೆ ಉತ್ತೀರ್ಣರಾಗಿದ್ದೀರಿ ಎಂದು ನಮಗೆ ತಿಳಿದಿಲ್ಲ. ಈ ವಿಡಿಯೋ ನೋಡಿ ನಮಗೆ ನಾಚಿಕೆಯಾಗುತ್ತಿದೆ. ಅಂದಹಾಗೆ, ನೀವು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನೂ ಪಡೆದಿದ್ದೀರಿ ಎಂದು ಪ್ರೊ. ದಿಲೀಪ್‌ ಮಂಡಲ್‌ರವರು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...