Homeಚಳವಳಿಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ - ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಮತ್ತು ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಕಾನೂನುಗಳ ಜಾರಿಗೆ ಬಿಜೆಪಿಯೇ ನೇರ ಕಾರಣ ಎಂದು ಆರೋಪಿಸಿರುವ ರೈತರು ಬಿಜೆಪಿಯನ್ನು ರಾಜಕೀಯವಾಗಿ ಸೋಲಿಸಲು ಸಜ್ಜಾಗಿದ್ದಾರೆ.

ಇತ್ತೀಚಿನ ಉಪ ಚುನಾವಣೆಗಳಲ್ಲಿ ಬಿಜೆಪಿ ಪಕ್ಷಕ್ಕಾದ ಸೋಲು ರೈತರನ್ನು ಹುರದುಂಬಿಸಿದೆ. ಈಗ ಬಿಜೆಪಿ ಆಳ್ವಿಕೆಯಲ್ಲಿರುವ ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ರಾಜಧಾನಿಗೆ ಲಗ್ಗೆಯಿಡಲು ರೈತರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 22 ರಂದು ಲಕ್ನೋದಲ್ಲಿ ಐತಿಹಾಸಿನ ಕಿಸಾನ್ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

2022 ರ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಅದಕ್ಕೆ ಪೂರ್ವಭಾವಿಯಾಗಿ ರೈತ ಹೋರಾಟದ ಚಟುವಟಿಕೆಗಳು ಗರಿಗೆದರಿವೆ. ಈ ಮಹಾಪಂಚಾಯತ್ ಸರ್ಕಾರದ ಶವಪೆಟ್ಟಿಗೆಗೆ ಹೊಡೆಯುವ ಕೊನೆಯ ಮೊಳೆ ಎಂದು ಸಾಬೀತು ಮಾಡುತ್ತೇವೆ ಎಂದು ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನವೆಂಬರ್ 22 ರಂದು ಲಕ್ನೋದಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕವಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಈಗ ಪೂರ್ವಾಂಚಲದಲ್ಲೂ ಅನ್ನದಾತರ ಚಳವಳಿ ತೀವ್ರಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಉಪಚುನಾವಣೆ ನಡೆದಿತ್ತು. 7 ವಿಧಾನಸಭಾ ಮತ್ತು ಒಂದು ಲೋಕಸಭಾ ಹೊರತುಪಡಿಸಿ ಉಳಿದೆಲ್ಲಾ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. “ಈ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ. ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ ಜನತೆ ನೀಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಕರೆಘಂಟೆಯಾಗಿದೆ. ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ತಾನದ ಫಲಿತಾಂಶಗಳು ಬಿಜೆಪಿಯ ವಿರುದ್ಧವಾಗಿ ಬಂದಿವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪ್ರತಿಕ್ರಿಯಿಸಿತ್ತು.

ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ

ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದಿಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿತ್ತು. ಅಸ್ಸಾಂ ಮತ್ತು ಪುದಿಚೆರಿ ಬಿಟ್ಟರೆ ಉಳಿದೆಲ್ಲ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. ಇದರ ನಂತರ ಸಂಯುಕ್ತ ಕಿಸಾನ್ ಮೋರ್ಚಾ ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ ಯೋಜನೆ ಘೋಷಿಸಿದೆ. 2022 ರಲ್ಲಿ ಚುನಾವಣೆ ನಡೆಯಲಿರುವ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಸೋಲಿಸುವುದಾಗಿ ರೈತರು ಘೋಷಿಸಿದ್ದಾರೆ.

ಬಿಜೆಪಿಯನ್ನು ತಿರಸ್ಕರಿಸುವಂತೆ ಉತ್ತರಪ್ರದೇಶ ಮತ್ತು ಉತ್ತರ ಖಂಡದ ರೈತರನ್ನು ಮನವೊಲಿಸುವುದು ಇದರ ಗುರಿಯಾಗಿದೆ. ಪ್ರಸ್ತುತ ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ಉತ್ತರ ಖಂಡದಲ್ಲಿ ಮಾತ್ರ ರೈತಾಂದೋಲನ ವ್ಯಾಪಕತೆಯನ್ನು ಹೊಂದಿದೆ. ಇದನ್ನು ಎರಡೂ ರಾಜ್ಯಗಳುದ್ದಕ್ಕೂ ವಿಸ್ತರಿಸುವುದು ಈ ‘ಮಿಷನ್ ಯುಪಿ-ಯುಕೆ’ಯ ಗುರಿಯಾಗಿದೆ.

ರೈತ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ನಾವೀಗ ಈ ಪ್ರತಿಭಟನೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸುವ ಹಂತಕ್ಕೆ ಬಂದಿದ್ದೇವೆ. ಒಂದು ಚಿಕ್ಕ ಭಾಗದಿಂದ ಇಡೀ ದೇಶಕ್ಕೆ ಹೋರಾಟ ವಿಸ್ತರಿಸುತ್ತಿದೆ. ಉತ್ತರ ಭಾರತದಲ್ಲಿ ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ತಾನ, ಉತ್ತರಾಖಂಡ, ಉತ್ತರ ಪ್ರದೇಶಗಳಲ್ಲಿ ರೈತ ಪ್ರತಿಭಟನೆ ತಾನಾಗೇ ವಿಸ್ತರಿಸಿದೆ. ಈಗ ಈ ಪ್ರತಿಭಟನೆ ದೇಶಾದ್ಯಂತ ವಿಸ್ತರಿಸಬೇಕಿದೆ. ಅದರ ಭಾಗವಾಗಿ ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಖಂಡ ಯೋಜನೆ ಘೋಷಿಸಿದ್ದೇವೆ ಎಂದಿದ್ದರು.

ಪಂಜಾಬ್‌

ಪಂಜಾಬಿನ ಚುನಾವಣೆಗೆ ಇದೇ ರಣನೀತಿ ಅನ್ವಯವಾಗುವುದಿಲ್ಲ ಎನ್ನುತ್ತಾರೆ ರೈತ ಮುಖಂಡರು. ಏಕೆಂದರೆ ಅಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಅಕಾಲಿ ದಳ ಇಂದು ಪ್ರತಿಸ್ಪರ್ಧಿಯಾಗೇ ಉಳಿದಿಲ್ಲ. ಪಂಜಾಬ್ ಮತ್ತು ಹರ್ಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ನಾಮಾವಶೇಷವಾಗಿಬಿಟ್ಟಿದೆ. ರೈತಾಂದೋಲನ ಈಗಾಗಲೇ ಇದನ್ನು ಆಗುಮಾಡಿಬಿಟ್ಟಿದೆ. ಬಿಜೆಪಿಯನ್ನು ಸೋಲಿಸಿ ಎಂಬ ಕರೆಗೆ ವಿಶೇಷ ಅರ್ಥವೇನಿಲ್ಲ. ಪಂಜಾಬಿನಲ್ಲಿ ಈ ಬಾರಿಯ ಸ್ಪರ್ಧೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನಡೆಯಲಿದೆ. ಯಾರನ್ನು ಸೋಲಿಸಬೇಕು? ಎಂಬುದು ಇಲ್ಲಿ ಮುಖ್ಯವಲ್ಲದಿರುವುದರಿಂದ ಯಾರನ್ನು ಗೆಲ್ಲಿಸಬೇಕು? ಎಂಬ ಚರ್ಚೆ ರಾಜಕೀಯ ನಿಲುವುಗಳ ಕೇಂದ್ರವಾಗಲಿದೆ. ಈ ಚರ್ಚೆ ಮತ್ತು ನಿಲುವುಗಳು ಭಿನ್ನ ಅಭಿಪ್ರಾಯಗಳಾಗಿ ಮೂಡಿ, ಭಿನ್ನಾಭಿಪ್ರಾಯಗಳಾಗಿ ಬೆಳೆಯುವ ಸಾಧ್ಯತೆ ಇದೆ. ರೈತಾಂದೋಲನದ ಐಕ್ಯತೆಗೆ ಧಕ್ಕೆ ತರುವ ಎಲ್ಲಾ ಸಾಧ್ಯತೆ ಇದೆ. ಈ ಅನಾಹುತವನ್ನು ತಡೆಯುವ ಬಗೆ ಹೇಗೆ ಎಂಬ ಚಿಂತೆ ರೈತ ಮುಂದಾಳುಗಳನ್ನು ಕಾಡುತ್ತಿದೆ. ಐಕ್ಯತೆಯನ್ನು ಕಾಯ್ದಿಟ್ಟುಕೊಳ್ಳಲು “ನೋ ಎಲೆಕ್ಷನ್ ಟಿಲ್ ರೆಸೊಲೂಷನ್” ಎಂಬ ಕರೆಕೊಡುವ ಕುರಿತು ಚಿಂತನೆ ನಡೆದಿದೆ. ಅಂದರೆ ರೈತರ ಪ್ರಶ್ನೆ ಬಗೆಹರಿಯುವ ತನಕ ಪಂಜಾಬಿನಲ್ಲಿ ಚುನಾವಣೆಯೇ ಬೇಡ ಎಂಬ ನಿಲುವನ್ನು ತಾಳಬೇಕು ಎಂಬುದು ಕೆಲವು ಮುಖಂಡರ ಪ್ರಸ್ತಾಪವಾಗಿದೆ. ಇದಿನ್ನು ಪಂಜಾಬಿನ 32 ರೈತ ಸಂಘಟನೆಗಳ ಒಕ್ಕೂಟದಲ್ಲಿ ಚರ್ಚೆಯಾಗಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಂದು ವೇಳೆ ರೈತ ಸಂಘಟನೆಗಳು ಏಕಾಭಿಪ್ರಾಯಕ್ಕೆ ತಲುಪಿದಲ್ಲಿ ಇದೊಂದು ಹೊಸ ರೀತಿಯ ರಾಜಕಾರಣಕ್ಕೆ ದಾರಿಮಾಡಲಿದೆ. ರೈತರ ಮಾತನ್ನು ಧಿಕ್ಕರಿಸಿ ಚುನಾವಣೆಗೆ ಹೋಗುವ ಧೈರ್ಯವನ್ನು ಕಾಂಗ್ರೆಸ್ ಆಗಲೀ, ಆಮ್ ಆದ್ಮಿ ಪಾರ್ಟಿಯಾಗಲೀ ತೋರಲು ಸಾಧ್ಯವೇ ಇಲ್ಲ. ಪ್ರತಿಪಕ್ಷಗಳು ಚುನಾವಣೆಗಳನ್ನು ಬಹಿಷ್ಕರಿಸಿದರೆ ಬಿಜೆಪಿ ಮತ್ತು ಅಕಾಲಿದಳಗಳು ಇಕ್ಕಟ್ಟಿಗೆ ಸಿಲುಕುತ್ತವೆ. ಬಲವಂತವಾಗಿ ಚುನಾವಣೆ ಮಾಡಿಸಲು ಹೊರಟರೆ ತೀವ್ರ ಸ್ವರೂಪದ ರೈತ ಪ್ರತಿರೋಧವನ್ನು ಎದುರಿಸಬೇಕಾಗಿ ಬರಲಿದೆ. ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...