Homeಚಳವಳಿಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ - ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಮತ್ತು ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಕಾನೂನುಗಳ ಜಾರಿಗೆ ಬಿಜೆಪಿಯೇ ನೇರ ಕಾರಣ ಎಂದು ಆರೋಪಿಸಿರುವ ರೈತರು ಬಿಜೆಪಿಯನ್ನು ರಾಜಕೀಯವಾಗಿ ಸೋಲಿಸಲು ಸಜ್ಜಾಗಿದ್ದಾರೆ.

ಇತ್ತೀಚಿನ ಉಪ ಚುನಾವಣೆಗಳಲ್ಲಿ ಬಿಜೆಪಿ ಪಕ್ಷಕ್ಕಾದ ಸೋಲು ರೈತರನ್ನು ಹುರದುಂಬಿಸಿದೆ. ಈಗ ಬಿಜೆಪಿ ಆಳ್ವಿಕೆಯಲ್ಲಿರುವ ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ರಾಜಧಾನಿಗೆ ಲಗ್ಗೆಯಿಡಲು ರೈತರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 22 ರಂದು ಲಕ್ನೋದಲ್ಲಿ ಐತಿಹಾಸಿನ ಕಿಸಾನ್ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

2022 ರ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಅದಕ್ಕೆ ಪೂರ್ವಭಾವಿಯಾಗಿ ರೈತ ಹೋರಾಟದ ಚಟುವಟಿಕೆಗಳು ಗರಿಗೆದರಿವೆ. ಈ ಮಹಾಪಂಚಾಯತ್ ಸರ್ಕಾರದ ಶವಪೆಟ್ಟಿಗೆಗೆ ಹೊಡೆಯುವ ಕೊನೆಯ ಮೊಳೆ ಎಂದು ಸಾಬೀತು ಮಾಡುತ್ತೇವೆ ಎಂದು ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನವೆಂಬರ್ 22 ರಂದು ಲಕ್ನೋದಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕವಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಈ ಮಹಾಪಂಚಾಯತ್ ರೈತ ವಿರೋಧಿ ಸರ್ಕಾರ ಮತ್ತು ಮೂರು ಕರಾಳ ಕಾನೂನುಗಳ ಶವಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಸಾಬೀತುಪಡಿಸುತ್ತದೆ. ಈಗ ಪೂರ್ವಾಂಚಲದಲ್ಲೂ ಅನ್ನದಾತರ ಚಳವಳಿ ತೀವ್ರಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

14 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಉಪಚುನಾವಣೆ ನಡೆದಿತ್ತು. 7 ವಿಧಾನಸಭಾ ಮತ್ತು ಒಂದು ಲೋಕಸಭಾ ಹೊರತುಪಡಿಸಿ ಉಳಿದೆಲ್ಲಾ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. “ಈ ಫಲಿತಾಂಶವು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನೀಡಿದ ಉತ್ತರವಾಗಿದೆ. ರೈತ ವಿರೋಧಿ ಕಾಯ್ದೆಗಳಿಗೆ ಉತ್ತರವನ್ನು ಉಪಚುನಾವಣೆಯ ಮೂಲಕ ಜನತೆ ನೀಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಕರೆಘಂಟೆಯಾಗಿದೆ. ಹರಿಯಾಣ, ಹಿಮಾಚಲ ಪ್ರದೇಶ, ರಾಜಸ್ತಾನದ ಫಲಿತಾಂಶಗಳು ಬಿಜೆಪಿಯ ವಿರುದ್ಧವಾಗಿ ಬಂದಿವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಪ್ರತಿಕ್ರಿಯಿಸಿತ್ತು.

ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ

ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದಿಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿತ್ತು. ಅಸ್ಸಾಂ ಮತ್ತು ಪುದಿಚೆರಿ ಬಿಟ್ಟರೆ ಉಳಿದೆಲ್ಲ ಕಡೆ ಬಿಜೆಪಿ ಸೋಲನ್ನು ಅನುಭವಿಸಿತ್ತು. ಇದರ ನಂತರ ಸಂಯುಕ್ತ ಕಿಸಾನ್ ಮೋರ್ಚಾ ಮಿಷನ್ ಉತ್ತರ ಪ್ರದೇಶ ಮತ್ತು ಉತ್ತರ ಖಂಡ ಯೋಜನೆ ಘೋಷಿಸಿದೆ. 2022 ರಲ್ಲಿ ಚುನಾವಣೆ ನಡೆಯಲಿರುವ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಸೋಲಿಸುವುದಾಗಿ ರೈತರು ಘೋಷಿಸಿದ್ದಾರೆ.

ಬಿಜೆಪಿಯನ್ನು ತಿರಸ್ಕರಿಸುವಂತೆ ಉತ್ತರಪ್ರದೇಶ ಮತ್ತು ಉತ್ತರ ಖಂಡದ ರೈತರನ್ನು ಮನವೊಲಿಸುವುದು ಇದರ ಗುರಿಯಾಗಿದೆ. ಪ್ರಸ್ತುತ ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ಉತ್ತರ ಖಂಡದಲ್ಲಿ ಮಾತ್ರ ರೈತಾಂದೋಲನ ವ್ಯಾಪಕತೆಯನ್ನು ಹೊಂದಿದೆ. ಇದನ್ನು ಎರಡೂ ರಾಜ್ಯಗಳುದ್ದಕ್ಕೂ ವಿಸ್ತರಿಸುವುದು ಈ ‘ಮಿಷನ್ ಯುಪಿ-ಯುಕೆ’ಯ ಗುರಿಯಾಗಿದೆ.

ರೈತ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ನಾವೀಗ ಈ ಪ್ರತಿಭಟನೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸುವ ಹಂತಕ್ಕೆ ಬಂದಿದ್ದೇವೆ. ಒಂದು ಚಿಕ್ಕ ಭಾಗದಿಂದ ಇಡೀ ದೇಶಕ್ಕೆ ಹೋರಾಟ ವಿಸ್ತರಿಸುತ್ತಿದೆ. ಉತ್ತರ ಭಾರತದಲ್ಲಿ ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ತಾನ, ಉತ್ತರಾಖಂಡ, ಉತ್ತರ ಪ್ರದೇಶಗಳಲ್ಲಿ ರೈತ ಪ್ರತಿಭಟನೆ ತಾನಾಗೇ ವಿಸ್ತರಿಸಿದೆ. ಈಗ ಈ ಪ್ರತಿಭಟನೆ ದೇಶಾದ್ಯಂತ ವಿಸ್ತರಿಸಬೇಕಿದೆ. ಅದರ ಭಾಗವಾಗಿ ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಖಂಡ ಯೋಜನೆ ಘೋಷಿಸಿದ್ದೇವೆ ಎಂದಿದ್ದರು.

ಪಂಜಾಬ್‌

ಪಂಜಾಬಿನ ಚುನಾವಣೆಗೆ ಇದೇ ರಣನೀತಿ ಅನ್ವಯವಾಗುವುದಿಲ್ಲ ಎನ್ನುತ್ತಾರೆ ರೈತ ಮುಖಂಡರು. ಏಕೆಂದರೆ ಅಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಅಕಾಲಿ ದಳ ಇಂದು ಪ್ರತಿಸ್ಪರ್ಧಿಯಾಗೇ ಉಳಿದಿಲ್ಲ. ಪಂಜಾಬ್ ಮತ್ತು ಹರ್ಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ನಾಮಾವಶೇಷವಾಗಿಬಿಟ್ಟಿದೆ. ರೈತಾಂದೋಲನ ಈಗಾಗಲೇ ಇದನ್ನು ಆಗುಮಾಡಿಬಿಟ್ಟಿದೆ. ಬಿಜೆಪಿಯನ್ನು ಸೋಲಿಸಿ ಎಂಬ ಕರೆಗೆ ವಿಶೇಷ ಅರ್ಥವೇನಿಲ್ಲ. ಪಂಜಾಬಿನಲ್ಲಿ ಈ ಬಾರಿಯ ಸ್ಪರ್ಧೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನಡೆಯಲಿದೆ. ಯಾರನ್ನು ಸೋಲಿಸಬೇಕು? ಎಂಬುದು ಇಲ್ಲಿ ಮುಖ್ಯವಲ್ಲದಿರುವುದರಿಂದ ಯಾರನ್ನು ಗೆಲ್ಲಿಸಬೇಕು? ಎಂಬ ಚರ್ಚೆ ರಾಜಕೀಯ ನಿಲುವುಗಳ ಕೇಂದ್ರವಾಗಲಿದೆ. ಈ ಚರ್ಚೆ ಮತ್ತು ನಿಲುವುಗಳು ಭಿನ್ನ ಅಭಿಪ್ರಾಯಗಳಾಗಿ ಮೂಡಿ, ಭಿನ್ನಾಭಿಪ್ರಾಯಗಳಾಗಿ ಬೆಳೆಯುವ ಸಾಧ್ಯತೆ ಇದೆ. ರೈತಾಂದೋಲನದ ಐಕ್ಯತೆಗೆ ಧಕ್ಕೆ ತರುವ ಎಲ್ಲಾ ಸಾಧ್ಯತೆ ಇದೆ. ಈ ಅನಾಹುತವನ್ನು ತಡೆಯುವ ಬಗೆ ಹೇಗೆ ಎಂಬ ಚಿಂತೆ ರೈತ ಮುಂದಾಳುಗಳನ್ನು ಕಾಡುತ್ತಿದೆ. ಐಕ್ಯತೆಯನ್ನು ಕಾಯ್ದಿಟ್ಟುಕೊಳ್ಳಲು “ನೋ ಎಲೆಕ್ಷನ್ ಟಿಲ್ ರೆಸೊಲೂಷನ್” ಎಂಬ ಕರೆಕೊಡುವ ಕುರಿತು ಚಿಂತನೆ ನಡೆದಿದೆ. ಅಂದರೆ ರೈತರ ಪ್ರಶ್ನೆ ಬಗೆಹರಿಯುವ ತನಕ ಪಂಜಾಬಿನಲ್ಲಿ ಚುನಾವಣೆಯೇ ಬೇಡ ಎಂಬ ನಿಲುವನ್ನು ತಾಳಬೇಕು ಎಂಬುದು ಕೆಲವು ಮುಖಂಡರ ಪ್ರಸ್ತಾಪವಾಗಿದೆ. ಇದಿನ್ನು ಪಂಜಾಬಿನ 32 ರೈತ ಸಂಘಟನೆಗಳ ಒಕ್ಕೂಟದಲ್ಲಿ ಚರ್ಚೆಯಾಗಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಂದು ವೇಳೆ ರೈತ ಸಂಘಟನೆಗಳು ಏಕಾಭಿಪ್ರಾಯಕ್ಕೆ ತಲುಪಿದಲ್ಲಿ ಇದೊಂದು ಹೊಸ ರೀತಿಯ ರಾಜಕಾರಣಕ್ಕೆ ದಾರಿಮಾಡಲಿದೆ. ರೈತರ ಮಾತನ್ನು ಧಿಕ್ಕರಿಸಿ ಚುನಾವಣೆಗೆ ಹೋಗುವ ಧೈರ್ಯವನ್ನು ಕಾಂಗ್ರೆಸ್ ಆಗಲೀ, ಆಮ್ ಆದ್ಮಿ ಪಾರ್ಟಿಯಾಗಲೀ ತೋರಲು ಸಾಧ್ಯವೇ ಇಲ್ಲ. ಪ್ರತಿಪಕ್ಷಗಳು ಚುನಾವಣೆಗಳನ್ನು ಬಹಿಷ್ಕರಿಸಿದರೆ ಬಿಜೆಪಿ ಮತ್ತು ಅಕಾಲಿದಳಗಳು ಇಕ್ಕಟ್ಟಿಗೆ ಸಿಲುಕುತ್ತವೆ. ಬಲವಂತವಾಗಿ ಚುನಾವಣೆ ಮಾಡಿಸಲು ಹೊರಟರೆ ತೀವ್ರ ಸ್ವರೂಪದ ರೈತ ಪ್ರತಿರೋಧವನ್ನು ಎದುರಿಸಬೇಕಾಗಿ ಬರಲಿದೆ. ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ರೈತಾಂದೋಲನ ಮುಂದೇನು? – ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...