Homeಚಳವಳಿರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

- Advertisement -
- Advertisement -

ರೈತ ಹೋರಾಟಕ್ಕೆ ನಾಲ್ಕು ತಿಂಗಳು ತುಂಬಿ ಐದನೇ ತಿಂಗಳಿಗೆ ಕಾಲಿಟ್ಟಿದೆ. ದೆಹಲಿಯ ಗಡಿಗಳು ಈ ನಾಲ್ಕು ತಿಂಗಳಲ್ಲಿ ಹೋರಾಟಗಾರರ ಸ್ವಂತ ಊರುಗಳಾಗಿ ಮಾರ್ಪಟ್ಟಿವೆ. ತಮ್ಮದೆ ಗ್ರಾಮದಲ್ಲಿ ಇರುವಂತೆ, ಇಲ್ಲಿನ ರೈತರು ಸಿಂಘು, ಟಿಕ್ರಿ, ಗಾಜಿಪುರ್‌, ಶಹಜಾನ್‌ಪುರ ಗಡಿಗಳನ್ನು ಗ್ರಾಮಗಳಂತೆ ಭಾವಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಪ್ರತಿಭಟನೆಯ ಉತ್ಸಾಹ ಕಡಿಮೆಯಾಗದಂತೆ ನೋಡಿಕೊಳ್ಳಲ್ಲು ಇಲ್ಲಿ ಕಾರ್ಯನಿರ್ವಹಿಸುತ್ತಿವರುವ ನೂರಾರು ಸಂಘಟನೆಗಳು ಪ್ರಯತ್ನ ಪಡುತ್ತಿವೆ. ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೋರಾಟಗಾರರಲ್ಲಿ ಉತ್ಸಾಹ ತುಂಬುತ್ತಿವೆ. ಅವುಗಳಲ್ಲಿ ಅಮೆರಿಕನ್ ಸಿಖ್ ಸಂಘಟನೆ ಕೂಡ ಒಂದು.

ಏಪ್ರಿಲ್ 2 ಮತ್ತು 3 ರಂದು ಸಿಂಘು ಗಡಿಯಲ್ಲಿ ಕಿಸಾನ್ ಪ್ರೀಮಿಯರ್‌ ಲೀಗ್ ಆಯೋಜನೆಗೊಂಡಿದೆ. ಅಮೆರಿಕನ್ ಸಿಖ್ ಸಂಘಟನೆ ನ್ಯಾಷನಲ್ ಶೂಟಿಂಗ್ ಬಾಲ್ ಚಾಂಪಿಯನ್‌ಶಿಪ್ ಆಯೋಜನೆ ಮಾಡಿದೆ. ಪ್ರತಿಭಟನಾ ಸ್ಥಳ ಸಿಂಘು ಗಡಿಯ ಪಾರ್ಕರ್‌ ಮಾಲ್ ಬಳಿ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ಈ ಕುರಿತು ದೆಹಲಿಯ ಗಡಿಗಳಲ್ಲಿ ಕಳೆದ ನಾಲ್ಕು ತಿಂಗಳಿನಿಂದ ರೈತರ ಪ್ರತಿಭಟನೆಯ ಇಂಚಿಂಚು ಮಾಹಿತಿ ನೀಡುತ್ತಿರುವ ಸಂದೀಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಕಿಸಾನ್ ಪ್ರೀಮಿಯರ್ ಲೀಗ್‌ನಲ್ಲಿ ಮೊದಲ ಬಹುಮಾನ ಒಂದು ಲಕ್ಷ ರೂಪಾಯಿ ಮತ್ತು ಟ್ರೋಫಿ, ಎರಡನೇ ಬಹುಮಾನ 70,000 ರೂಪಾಯಿ ಜೊತೆಗೆ ಟ್ರೋಪಿ ಮತ್ತು ಮೂರನೇ, ನಾಲ್ಕನೇ ಬಹುಮಾನವಾಗಿ ಟ್ರೋಪಿ ಜೊತೆಗೆ 21,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

ಎಲ್ಲಾ ಗಡಿಗಳಲ್ಲಿ ಜಿಮ್, ಕ್ರೀಡಾ ಸೌಲಭ್ಯಗಳಿರುವುದು ತಿಳಿದಿರುವ ವಿಷಯವೆ. ಸಂಜೆಯ ವೇಳೆ ಗಡಿಗಳಲ್ಲಿ ಯುವಜನತೆ ಒಂದೆಡೆ ಸೇರಿ ಆಟಗಳನ್ನು ಆಡುತ್ತಾರೆ. ಕಬ್ಬಡ್ಡಿ, ಫುಟ್‌ಬಾಲ್, ವಾಲಿಬಾಲ್ ಸೇರಿದಂತೆ ಹಲವು ಆಟಗಳಲ್ಲಿ ತೊಡಗಿಸಿಕೊಳ್ಳತ್ತಾರೆ. ಇವರುಗಳನ್ನು ಪ್ರೋತ್ಸಾಹಿಸಲು ಈ ಪಂದ್ಯಾವಳಿ ಆಯೋಜಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತೇಜನ ನೀಡುವ ಸಲುವಾಗಿ, ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯ 12 ಬಾಲಕಿಯರ ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ನೂರಾರು ಕಿಲೋಮೀಟರ್ ದೂರಗಳಿಂದ ಬಂದು ಸಿಂಗು ಗಡಿಯಲ್ಲಿ ಕಬ್ಬಡಿ ಆಡಿ ರೈತರಿಗೆ ಬೆಂಬಲ ಸೂಚಿಸಿದ್ದರು.

ಒಟ್ಟಾರೆ, ಗಡಿಗಳನ್ನೇ ಮನೆಗಳನ್ನಾಗಿಸಿಕೊಂಡಿರುವ ರೈತರು ಹಲವು ಕಾರ್ಯಕ್ರಮಗಳ ಮೂಲಕ ತಮ್ಮಲ್ಲಿನ ಪ್ರತಿಭಟನಾ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾರ, ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಗಡಿಗಳಿಂದ ವಾಪಸ್ ಆಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡುತ್ತಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...