ಕಳೆದ ನವೆಂಬರ್ನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು (ಜುಲೈ 22) ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ಕಿಸಾನ್ ಸಂಸತ್ ಪ್ರಾರಂಭಿಸಲಿದ್ದಾರೆ. ಮಾನ್ಸೂನ್ ಅಧಿವೇಶನ ನಡೆಯುವ ಪ್ರತಿದಿನ 200 ಜನರ ರೈತರ ಗುಂಪು ಆಂದೋಲನ ನಡೆಸಲಿದೆ ಎಂದು ರೈತ ನಾಯಕರು ಹೇಳಿದ್ದಾರೆ.
ಇಂದಿನಿಂದ (ಜುಲೈ 22) ಆಗಸ್ಟ್ 9 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಜಂತರ್ ಮಂತರ್ ನಲ್ಲಿ ಕಿಸಾನ್ ಸಂಸತ್ ನಡೆಸಲು ದೆಹಲಿ ಸರ್ಕಾರ ಮತ್ತು ಪೊಲೀಸರು ಒಪ್ಪಿಗೆ ನೀಡಿದ್ದಾರೆ. ಇದಕ್ಕಾಗಿ ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂಬ ಷರತ್ತು ಹಾಕಲಾಗಿದೆ. ಷರತ್ತುಗಳ ಪ್ರಕಾರ ಪ್ರತಿದಿನ 206 ಜನರಿಗೆ ಮಾತ್ರ ಪ್ರತಿಭಟನೆ ನಡೆಸಲು ಅವಕಾಶವಿದೆ.
ಸಿಂಘು ಗಡಿಯಿಂದ ಜಂತರ್ ಮಂತರ್ಗೆ ಹೋಗುತ್ತಿದ್ದ ಸುಮಾರು 200 ರೈತರಿದ್ದ ಬಸ್ಗಳನ್ನು ಜಿಟಿ ಕರ್ನಾಲ್ ರಸ್ತೆಯಲ್ಲಿ ಪೊಲೀಸರು ತಡೆದಿದ್ದರು. 206 ಜನರಿಗಷ್ಟೇ ಅವಕಾಶ ನೀಡಲಾಗಿದ್ದು, ಉಳಿದವರನ್ನು ಬೇರೆ ಮಾರ್ಗಗಳ ಮೂಲಕ ಹೋಗಲು ತಿಳಿಸಿದ್ದಾರೆ.
ಇದನ್ನೂ ಓದಿ: ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ
200 किसान निकल गए हैं आज संसद मार्च के लिए। आज का दिन एक ऐतिहासिक दिन है जब किसान देश के संसद के सामने जा कर खुद की संसद लगाएगा।
देखिए @_YogendraYadav का यह वीडियो: #FarmersParliment #FarmersProtest pic.twitter.com/rppl18CVGy
— Swaraj Abhiyan (@swaraj_abhiyan) July 22, 2021
“ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.
ಕಿಸಾನ್ ಪಾರ್ಲಿಮೆಂಟ್ ಪ್ರತಿ ದಿನವೂ ನಡೆಯಲಿದೆ. ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ. ನಂತರ ಉಳಿದ ಕಾಯ್ದೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ರೈತರು ತಿಳಿಸಿದ್ದಾರೆ.
ಕೃಷಿ ಕಾನೂನುಗಳ ವಿರುದ್ಧ ಸಂಸತ್ ಭವನ ಆವರಣದ ಗಾಂಧಿ ಪ್ರತಿಮೆ ಬಳಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು. ಇಂದು ಸಂಸತ್ತು ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದು ಪಕ್ಷದ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.
Delhi: Congress leader Rahul Gandhi staged a protest along with party MPs in front of Gandhi Statue, over three farm laws.#FarmLaws
(ANI) pic.twitter.com/hRTWwIhkTE
— NDTV (@ndtv) July 22, 2021
ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ವಿವಾದಿತ ಕೃಷಿ ಕಾನೂನುಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮುಮದೆ ಭಿತ್ತಿಪತ್ರಗಳನ್ನು ತೋರಿಸಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.
Delhi: Shiromani Akali Dal (SAD) MPs protest over the three farm laws and show placards to Agriculture Minister Narendra Singh Tomar at the Parliament premises. pic.twitter.com/5E0ILvp0Tb
— ANI (@ANI) July 22, 2021
ಜಂತರ್ ಮಂತರ್ನಲ್ಲಿ ಕಿಸಾನ್ ಸಂಸತ್ ರೈತ ಪ್ರತಿಭಟನೆಯಲ್ಲಿ ಭಾಗವಹಿಸುವವರು ಗುರುತಿನ ಚೀಟಿಗಳನ್ನು ಹಾಕಿಕೊಳ್ಳಲಿದ್ದಾರೆ.
ಜಂತರ್ ಮಂತರ್ ಹೊರಗೆ ಭಾರಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಬ್ಯಾರಿಕೇಡ್ಗಳ ಜೊತೆಗೆ ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದಾರೆ.
Delhi: Latest visuals from Jantar Mantar ahead of farmers' protest against three farm laws
Security personnel deployed & barricades have been put up at the spot pic.twitter.com/KIKJtmAzjO
— ANI (@ANI) July 22, 2021
ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ. ಇಂದಿನಿಂದ ಆಗಸ್ಟ್ 9 ರವರೆಗೆ ಜಂತರ್ ಮಂತರ್ನಲ್ಲಿ ಕಿಸಾನ್ ಸಂಸತ್ ನಡೆಸಲು ರೈತರು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು