Homeಮುಖಪುಟದಿಟ್ಟ ರೈತ ಹೋರಾಟದ ಕುರಿತ 'ಕಿಸಾನ್ ಸತ್ಯಾಗ್ರಹ' ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ದಿಟ್ಟ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯ

ಕನ್ನಡದ ಹೆಸರಾಂತ ನಿರ್ದೇಶಕ ಕೇಸರಿ ಹರವೂರವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿ ಕರ್ನಾಟಕ ಹಲವು ಕಡೆಗಳಲ್ಲಿ ಪ್ರದರ್ಶನ ಮತ್ತು ಚರ್ಚೆ ನಡೆಸಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗೆ ಕಾನೂನು ಜಾರಿಗೊಳಿಸಲು ಆಗ್ರಹಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ನಡೆದು ಯಶಸ್ವಿಯಾದ ಐತಿಹಾಸಿಕ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಈಗ ಆನ್‌ಲೈನ್‌ನಲ್ಲಿ ಲಭ್ಯವಿದೆ.

ಕನ್ನಡದ ಹೆಸರಾಂತ ನಿರ್ದೇಶಕ ಕೇಸರಿ ಹರವೂರವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿ ಕರ್ನಾಟಕ ಹಲವು ಕಡೆಗಳಲ್ಲಿ ಪ್ರದರ್ಶನ ಮತ್ತು ಚರ್ಚೆ ನಡೆಸಿದ್ದರು. ಇದೀಗ ಹೆಚ್ಚಿನ ಜನರಿಗೆ ತಲುಪಿಸುವ ಉದ್ದೇಶದಿಂದ https://filmshow.co.in ಆನ್‌ಲೈನ್ ವೇದಿಕೆಯಲ್ಲಿ ಚಿತ್ರ ಬಿಡುಗಡೆ ಮಾಡಲಾಗಿದೆ.

“ಕಿಸಾನ್ ಸತ್ಯಾಗ್ರಹ ಚಿತ್ರವನ್ನು ಈಗ ನಮ್ಮದೇ ಜಾಲತಾಣದಲ್ಲೂ ನೋಡಬಹುದು. ಸಮುದಾಯ ಪ್ರದರ್ಶನಗಳು ವಿರಳವಾಗುತ್ತಿರುವ ಈ ಡಿಜಿಟಲ್ ಕಾಲಕ್ಕೆ ಹೊಂದಿಕೊಂಡು ಆಸಕ್ತರೆಲ್ಲರಿಗೂ ಈ ಚಿತ್ರವನ್ನು ಸಾಧ್ಯವಾದಷ್ಟು ತಲುಪಿಸಬೇಕು ಎನ್ನುವ ಉದ್ದೇಶದಿಂದ ಈ ಪ್ರಯತ್ನ ಮಾಡಿದ್ದೇವೆ. ನಿಮ್ಮ ನಿಮ್ಮ ಅನುಕೂಲದ ಸಮಯದಲ್ಲಿ ಒಂದು ಸಣ್ಣ ದೇಣಿಗೆ ಕೊಟ್ಟು ಈ ಚಿತ್ರವನ್ನು ನೋಡಬಹುದು. ಕನ್ನಡ ಅಥವಾ ಇಂಗ್ಲಿಷ್ ಅವತರಣಿಕೆಯನ್ನು ಆಯ್ದುಕೊಳ್ಳಬಹುದು” ಎಂದು ಕೇಸರಿ ಹರವೂರವರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

ಕೇಸರಿ ಹರವೂರವರ ‘ಭೂಮಿಗೀತ’ ಚಿತ್ರ ಯಶಸ್ಸು ಗಳಿಸಿ ಚರ್ಚೆ ಹುಟ್ಟುಹಾಕಿತ್ತು. ಆನಂತರ ಅಘನಾಶಿನಿ ಮತ್ತು ಮಕ್ಕಳು, ನದಿ ಮತ್ತು ನಗರ ಕಣಿವೆ ಎಂಬ ಪರಿಸರ ಕಾಳಜಿಯ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿ ಹೆಸರು ಗಳಿಸಿದ್ದರು. 2019 ರಲ್ಲಿ ರೈತ ಸಂಘದ ಪುಟ್ಟಣ್ಣಯ್ಯ ಎಂ ಸಾಕ್ಷ್ಯ ಚಿತ್ರ ಸಹ ನಿರ್ಮಿಸಿದ್ದಾರೆ.

‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿಯೂ ನೋಡಬಹುದು. ಕೇವಲ 99ರೂ ಪಾವತಿಸಿದರೆ ಈ ಸಾಕ್ಷ್ಯಚಿತ್ರವನ್ನು ಕುಟುಂಬ, ಸ್ನೇಹಿತರ ಸಮೇತ ನೋಡಬಹುದಾಗಿದೆ. ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...