Homeಕರ್ನಾಟಕ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

- Advertisement -
- Advertisement -

ರೈತ ಚಳವಳಿಯ ಸಂದರ್ಭದಲ್ಲಿ ರಚಿತವಾದ, ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ‘ಕಿಸಾನ್‌ ಏಕ್ತಾ ಮೋರ್ಚಾ’ (@Kisanektamorcha), ‘ಟ್ರಾಕ್ಟರ್‌2ಟ್ವಿಟರ್‌’ (@Tractor2twitr) ಖಾತೆಗಳನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ತಡೆಹಿಡಿದಿದೆ.

“ಭಾರತದ ಸ್ಥಳೀಯ ಕಾನೂನುಗಳ ಅಡಿಯಲ್ಲಿ ಟ್ವಿಟರ್‌ನ ಹೊಣೆಗಾರಿಕೆಯನ್ನು ಪಾಲಿಸಲು, ನಾವು ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ- 2000ರ ಅಡಿಯಲ್ಲಿ ಭಾರತದಲ್ಲಿ ಈ ಖಾತೆಯನ್ನು ತಡೆಹಿಡಿದಿದ್ದೇವೆ” ಎಂದು ಟ್ವಿಟರ್‌ ಸಂಸ್ಥೆ ತಿಳಿಸಿದೆ.

ಈ ಕುರಿತು ರೈತ ನಾಯಕ ಯೋಗೇಂದ್ರ ಯಾದವ್‌ ಟ್ವೀಟ್ ಮಾಡಿದ್ದು, ಟ್ವಿಟರ್‌ ನಡೆಯನ್ನು ಖಂಡಿಸಿದ್ದಾರೆ. “ಮೋದಿ ಸರ್ಕಾರ ಅಧಿಕೃತವಾಗಿ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ಆಚರಿಸುತ್ತಿದೆ” ಎಂದು ಆರೋಪಿಸಿದ್ದಾರೆ. “ರೈತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಖಾತೆಗಳನ್ನು ತಡೆ ಹಿಡಿಯಲಾಗುತ್ತಿದೆ. ಏನಾಗುತ್ತಿದೆ?” ಎಂದು ಪ್ರಶ್ನಿಸಿರುವ ಅವರು ಟ್ವಿಟರ್‌ ಇಂಡಿಯಾ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೂ ಟ್ವಿಟರ್‌ ಸಂಸ್ಥೆ ಈ ರೀತಿಯ ನೋಟಿಸ್‌ ಕಳುಹಿಸಿದೆ. ತಮಗೆ ಬಂದಿರುವ ನೋಟಿಸ್‌ ಪ್ರತಿಯನ್ನು ರಾಣಾ ಅಯೂಬ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಿಸಾನ್‌ಏಕ್ತಾಮೋರ್ಚಾ’ ಹಾಗೂ ‘ಟ್ರಾಕ್ಟರ್‌2ಟ್ವಿಟರ್‌’ ಖಾತೆಗಳಿಗೆ ನೀಡಿರುವ ಕಾರಣಗಳನ್ನೇ ಇಲ್ಲಿಯೂ ನೀಡಲಾಗಿದೆ.

“ಹಲೋ ಟ್ವಿಟರ್, ನಿಜವಾಗಿಯೂ ಏನಿದು?” ಎಂದು ರಾಣಾ ಅಯೂಬ್‌ ಪ್ರಶ್ನಿಸಿದ್ದಾರೆ.

“ನಮ್ಮ ಸೇವೆಯನ್ನು ಬಳಸುವ ಜನರ ದನಿಯನ್ನು ರಕ್ಷಿಸುವುದು, ಗೌರವಿಸುವುದು ಟ್ವಿಟರ್‌ನ ನಂಬಿಕೆ. ಯಾವುದಾದರೂ ವಿಷಯವನ್ನು ತೆಗೆದುಹಾಕಬೇಕೆಂದು ಅಧಿಕೃತ ಘಟಕದಿಂದ (ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆ) ನಾವು ಕಾನೂನು ವಿನಂತಿಯನ್ನು ಸ್ವೀಕರಿಸಿದರೆ ಖಾತೆದಾರರಿಗೆ ತಿಳಿಸುವುದು ನಮ್ಮ ಪಾಲಿಸಿಯಾಗಿದೆ. ಕೋರಿಕೆ ಕಳುಹಿಸಿರುವ ದೇಶದಲ್ಲಿ ಸದರಿ ಬಳಕೆದಾರರು ವಾಸಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸೂಚಿಸುತ್ತೇವೆ” ಎಂದು ರಾಣಾ ಅಯೂಬ್ ಅವರಿಗೆ ಬಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಣಾ ಅಯೂಬ್‌ ಅವರ ಟ್ವೀಟ್‌ಗೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಟೆನ್ನಿಸ್ ದಂತಕಥೆ ಮಾರ್ಟಿನಾ ನವರಟೋಲಿನಾ ಪ್ರತಿಕ್ರಿಯಿಸಿದ್ದು, “ಹಾಗಾದರೆ ಮುಂದಿನವರು ಯಾರು? ಇದು ಭೀಕರವಾದದ್ದಷ್ಟೇ” ಎಂದು ಪೋಸ್ಟ್‌ ಮಾಡಿ ರಾಣಾ ಅಯೂಬ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...