Homeಕರ್ನಾಟಕ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

- Advertisement -
- Advertisement -

ರೈತ ಚಳವಳಿಯ ಸಂದರ್ಭದಲ್ಲಿ ರಚಿತವಾದ, ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ‘ಕಿಸಾನ್‌ ಏಕ್ತಾ ಮೋರ್ಚಾ’ (@Kisanektamorcha), ‘ಟ್ರಾಕ್ಟರ್‌2ಟ್ವಿಟರ್‌’ (@Tractor2twitr) ಖಾತೆಗಳನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ತಡೆಹಿಡಿದಿದೆ.

“ಭಾರತದ ಸ್ಥಳೀಯ ಕಾನೂನುಗಳ ಅಡಿಯಲ್ಲಿ ಟ್ವಿಟರ್‌ನ ಹೊಣೆಗಾರಿಕೆಯನ್ನು ಪಾಲಿಸಲು, ನಾವು ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ- 2000ರ ಅಡಿಯಲ್ಲಿ ಭಾರತದಲ್ಲಿ ಈ ಖಾತೆಯನ್ನು ತಡೆಹಿಡಿದಿದ್ದೇವೆ” ಎಂದು ಟ್ವಿಟರ್‌ ಸಂಸ್ಥೆ ತಿಳಿಸಿದೆ.

ಈ ಕುರಿತು ರೈತ ನಾಯಕ ಯೋಗೇಂದ್ರ ಯಾದವ್‌ ಟ್ವೀಟ್ ಮಾಡಿದ್ದು, ಟ್ವಿಟರ್‌ ನಡೆಯನ್ನು ಖಂಡಿಸಿದ್ದಾರೆ. “ಮೋದಿ ಸರ್ಕಾರ ಅಧಿಕೃತವಾಗಿ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ಆಚರಿಸುತ್ತಿದೆ” ಎಂದು ಆರೋಪಿಸಿದ್ದಾರೆ. “ರೈತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಖಾತೆಗಳನ್ನು ತಡೆ ಹಿಡಿಯಲಾಗುತ್ತಿದೆ. ಏನಾಗುತ್ತಿದೆ?” ಎಂದು ಪ್ರಶ್ನಿಸಿರುವ ಅವರು ಟ್ವಿಟರ್‌ ಇಂಡಿಯಾ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೂ ಟ್ವಿಟರ್‌ ಸಂಸ್ಥೆ ಈ ರೀತಿಯ ನೋಟಿಸ್‌ ಕಳುಹಿಸಿದೆ. ತಮಗೆ ಬಂದಿರುವ ನೋಟಿಸ್‌ ಪ್ರತಿಯನ್ನು ರಾಣಾ ಅಯೂಬ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಿಸಾನ್‌ಏಕ್ತಾಮೋರ್ಚಾ’ ಹಾಗೂ ‘ಟ್ರಾಕ್ಟರ್‌2ಟ್ವಿಟರ್‌’ ಖಾತೆಗಳಿಗೆ ನೀಡಿರುವ ಕಾರಣಗಳನ್ನೇ ಇಲ್ಲಿಯೂ ನೀಡಲಾಗಿದೆ.

“ಹಲೋ ಟ್ವಿಟರ್, ನಿಜವಾಗಿಯೂ ಏನಿದು?” ಎಂದು ರಾಣಾ ಅಯೂಬ್‌ ಪ್ರಶ್ನಿಸಿದ್ದಾರೆ.

“ನಮ್ಮ ಸೇವೆಯನ್ನು ಬಳಸುವ ಜನರ ದನಿಯನ್ನು ರಕ್ಷಿಸುವುದು, ಗೌರವಿಸುವುದು ಟ್ವಿಟರ್‌ನ ನಂಬಿಕೆ. ಯಾವುದಾದರೂ ವಿಷಯವನ್ನು ತೆಗೆದುಹಾಕಬೇಕೆಂದು ಅಧಿಕೃತ ಘಟಕದಿಂದ (ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆ) ನಾವು ಕಾನೂನು ವಿನಂತಿಯನ್ನು ಸ್ವೀಕರಿಸಿದರೆ ಖಾತೆದಾರರಿಗೆ ತಿಳಿಸುವುದು ನಮ್ಮ ಪಾಲಿಸಿಯಾಗಿದೆ. ಕೋರಿಕೆ ಕಳುಹಿಸಿರುವ ದೇಶದಲ್ಲಿ ಸದರಿ ಬಳಕೆದಾರರು ವಾಸಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸೂಚಿಸುತ್ತೇವೆ” ಎಂದು ರಾಣಾ ಅಯೂಬ್ ಅವರಿಗೆ ಬಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಣಾ ಅಯೂಬ್‌ ಅವರ ಟ್ವೀಟ್‌ಗೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಟೆನ್ನಿಸ್ ದಂತಕಥೆ ಮಾರ್ಟಿನಾ ನವರಟೋಲಿನಾ ಪ್ರತಿಕ್ರಿಯಿಸಿದ್ದು, “ಹಾಗಾದರೆ ಮುಂದಿನವರು ಯಾರು? ಇದು ಭೀಕರವಾದದ್ದಷ್ಟೇ” ಎಂದು ಪೋಸ್ಟ್‌ ಮಾಡಿ ರಾಣಾ ಅಯೂಬ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....