Homeಕರ್ನಾಟಕ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

- Advertisement -
- Advertisement -

ರೈತ ಚಳವಳಿಯ ಸಂದರ್ಭದಲ್ಲಿ ರಚಿತವಾದ, ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ‘ಕಿಸಾನ್‌ ಏಕ್ತಾ ಮೋರ್ಚಾ’ (@Kisanektamorcha), ‘ಟ್ರಾಕ್ಟರ್‌2ಟ್ವಿಟರ್‌’ (@Tractor2twitr) ಖಾತೆಗಳನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ತಡೆಹಿಡಿದಿದೆ.

“ಭಾರತದ ಸ್ಥಳೀಯ ಕಾನೂನುಗಳ ಅಡಿಯಲ್ಲಿ ಟ್ವಿಟರ್‌ನ ಹೊಣೆಗಾರಿಕೆಯನ್ನು ಪಾಲಿಸಲು, ನಾವು ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ- 2000ರ ಅಡಿಯಲ್ಲಿ ಭಾರತದಲ್ಲಿ ಈ ಖಾತೆಯನ್ನು ತಡೆಹಿಡಿದಿದ್ದೇವೆ” ಎಂದು ಟ್ವಿಟರ್‌ ಸಂಸ್ಥೆ ತಿಳಿಸಿದೆ.

ಈ ಕುರಿತು ರೈತ ನಾಯಕ ಯೋಗೇಂದ್ರ ಯಾದವ್‌ ಟ್ವೀಟ್ ಮಾಡಿದ್ದು, ಟ್ವಿಟರ್‌ ನಡೆಯನ್ನು ಖಂಡಿಸಿದ್ದಾರೆ. “ಮೋದಿ ಸರ್ಕಾರ ಅಧಿಕೃತವಾಗಿ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ಆಚರಿಸುತ್ತಿದೆ” ಎಂದು ಆರೋಪಿಸಿದ್ದಾರೆ. “ರೈತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಖಾತೆಗಳನ್ನು ತಡೆ ಹಿಡಿಯಲಾಗುತ್ತಿದೆ. ಏನಾಗುತ್ತಿದೆ?” ಎಂದು ಪ್ರಶ್ನಿಸಿರುವ ಅವರು ಟ್ವಿಟರ್‌ ಇಂಡಿಯಾ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೂ ಟ್ವಿಟರ್‌ ಸಂಸ್ಥೆ ಈ ರೀತಿಯ ನೋಟಿಸ್‌ ಕಳುಹಿಸಿದೆ. ತಮಗೆ ಬಂದಿರುವ ನೋಟಿಸ್‌ ಪ್ರತಿಯನ್ನು ರಾಣಾ ಅಯೂಬ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಿಸಾನ್‌ಏಕ್ತಾಮೋರ್ಚಾ’ ಹಾಗೂ ‘ಟ್ರಾಕ್ಟರ್‌2ಟ್ವಿಟರ್‌’ ಖಾತೆಗಳಿಗೆ ನೀಡಿರುವ ಕಾರಣಗಳನ್ನೇ ಇಲ್ಲಿಯೂ ನೀಡಲಾಗಿದೆ.

“ಹಲೋ ಟ್ವಿಟರ್, ನಿಜವಾಗಿಯೂ ಏನಿದು?” ಎಂದು ರಾಣಾ ಅಯೂಬ್‌ ಪ್ರಶ್ನಿಸಿದ್ದಾರೆ.

“ನಮ್ಮ ಸೇವೆಯನ್ನು ಬಳಸುವ ಜನರ ದನಿಯನ್ನು ರಕ್ಷಿಸುವುದು, ಗೌರವಿಸುವುದು ಟ್ವಿಟರ್‌ನ ನಂಬಿಕೆ. ಯಾವುದಾದರೂ ವಿಷಯವನ್ನು ತೆಗೆದುಹಾಕಬೇಕೆಂದು ಅಧಿಕೃತ ಘಟಕದಿಂದ (ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆ) ನಾವು ಕಾನೂನು ವಿನಂತಿಯನ್ನು ಸ್ವೀಕರಿಸಿದರೆ ಖಾತೆದಾರರಿಗೆ ತಿಳಿಸುವುದು ನಮ್ಮ ಪಾಲಿಸಿಯಾಗಿದೆ. ಕೋರಿಕೆ ಕಳುಹಿಸಿರುವ ದೇಶದಲ್ಲಿ ಸದರಿ ಬಳಕೆದಾರರು ವಾಸಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸೂಚಿಸುತ್ತೇವೆ” ಎಂದು ರಾಣಾ ಅಯೂಬ್ ಅವರಿಗೆ ಬಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಣಾ ಅಯೂಬ್‌ ಅವರ ಟ್ವೀಟ್‌ಗೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಟೆನ್ನಿಸ್ ದಂತಕಥೆ ಮಾರ್ಟಿನಾ ನವರಟೋಲಿನಾ ಪ್ರತಿಕ್ರಿಯಿಸಿದ್ದು, “ಹಾಗಾದರೆ ಮುಂದಿನವರು ಯಾರು? ಇದು ಭೀಕರವಾದದ್ದಷ್ಟೇ” ಎಂದು ಪೋಸ್ಟ್‌ ಮಾಡಿ ರಾಣಾ ಅಯೂಬ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...