Homeಕರ್ನಾಟಕ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

- Advertisement -
- Advertisement -

ರೈತ ಚಳವಳಿಯ ಸಂದರ್ಭದಲ್ಲಿ ರಚಿತವಾದ, ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ‘ಕಿಸಾನ್‌ ಏಕ್ತಾ ಮೋರ್ಚಾ’ (@Kisanektamorcha), ‘ಟ್ರಾಕ್ಟರ್‌2ಟ್ವಿಟರ್‌’ (@Tractor2twitr) ಖಾತೆಗಳನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ತಡೆಹಿಡಿದಿದೆ.

“ಭಾರತದ ಸ್ಥಳೀಯ ಕಾನೂನುಗಳ ಅಡಿಯಲ್ಲಿ ಟ್ವಿಟರ್‌ನ ಹೊಣೆಗಾರಿಕೆಯನ್ನು ಪಾಲಿಸಲು, ನಾವು ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ- 2000ರ ಅಡಿಯಲ್ಲಿ ಭಾರತದಲ್ಲಿ ಈ ಖಾತೆಯನ್ನು ತಡೆಹಿಡಿದಿದ್ದೇವೆ” ಎಂದು ಟ್ವಿಟರ್‌ ಸಂಸ್ಥೆ ತಿಳಿಸಿದೆ.

ಈ ಕುರಿತು ರೈತ ನಾಯಕ ಯೋಗೇಂದ್ರ ಯಾದವ್‌ ಟ್ವೀಟ್ ಮಾಡಿದ್ದು, ಟ್ವಿಟರ್‌ ನಡೆಯನ್ನು ಖಂಡಿಸಿದ್ದಾರೆ. “ಮೋದಿ ಸರ್ಕಾರ ಅಧಿಕೃತವಾಗಿ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ಆಚರಿಸುತ್ತಿದೆ” ಎಂದು ಆರೋಪಿಸಿದ್ದಾರೆ. “ರೈತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಖಾತೆಗಳನ್ನು ತಡೆ ಹಿಡಿಯಲಾಗುತ್ತಿದೆ. ಏನಾಗುತ್ತಿದೆ?” ಎಂದು ಪ್ರಶ್ನಿಸಿರುವ ಅವರು ಟ್ವಿಟರ್‌ ಇಂಡಿಯಾ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೂ ಟ್ವಿಟರ್‌ ಸಂಸ್ಥೆ ಈ ರೀತಿಯ ನೋಟಿಸ್‌ ಕಳುಹಿಸಿದೆ. ತಮಗೆ ಬಂದಿರುವ ನೋಟಿಸ್‌ ಪ್ರತಿಯನ್ನು ರಾಣಾ ಅಯೂಬ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಿಸಾನ್‌ಏಕ್ತಾಮೋರ್ಚಾ’ ಹಾಗೂ ‘ಟ್ರಾಕ್ಟರ್‌2ಟ್ವಿಟರ್‌’ ಖಾತೆಗಳಿಗೆ ನೀಡಿರುವ ಕಾರಣಗಳನ್ನೇ ಇಲ್ಲಿಯೂ ನೀಡಲಾಗಿದೆ.

“ಹಲೋ ಟ್ವಿಟರ್, ನಿಜವಾಗಿಯೂ ಏನಿದು?” ಎಂದು ರಾಣಾ ಅಯೂಬ್‌ ಪ್ರಶ್ನಿಸಿದ್ದಾರೆ.

“ನಮ್ಮ ಸೇವೆಯನ್ನು ಬಳಸುವ ಜನರ ದನಿಯನ್ನು ರಕ್ಷಿಸುವುದು, ಗೌರವಿಸುವುದು ಟ್ವಿಟರ್‌ನ ನಂಬಿಕೆ. ಯಾವುದಾದರೂ ವಿಷಯವನ್ನು ತೆಗೆದುಹಾಕಬೇಕೆಂದು ಅಧಿಕೃತ ಘಟಕದಿಂದ (ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆ) ನಾವು ಕಾನೂನು ವಿನಂತಿಯನ್ನು ಸ್ವೀಕರಿಸಿದರೆ ಖಾತೆದಾರರಿಗೆ ತಿಳಿಸುವುದು ನಮ್ಮ ಪಾಲಿಸಿಯಾಗಿದೆ. ಕೋರಿಕೆ ಕಳುಹಿಸಿರುವ ದೇಶದಲ್ಲಿ ಸದರಿ ಬಳಕೆದಾರರು ವಾಸಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸೂಚಿಸುತ್ತೇವೆ” ಎಂದು ರಾಣಾ ಅಯೂಬ್ ಅವರಿಗೆ ಬಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಣಾ ಅಯೂಬ್‌ ಅವರ ಟ್ವೀಟ್‌ಗೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಟೆನ್ನಿಸ್ ದಂತಕಥೆ ಮಾರ್ಟಿನಾ ನವರಟೋಲಿನಾ ಪ್ರತಿಕ್ರಿಯಿಸಿದ್ದು, “ಹಾಗಾದರೆ ಮುಂದಿನವರು ಯಾರು? ಇದು ಭೀಕರವಾದದ್ದಷ್ಟೇ” ಎಂದು ಪೋಸ್ಟ್‌ ಮಾಡಿ ರಾಣಾ ಅಯೂಬ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....