Homeಕರ್ನಾಟಕ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

- Advertisement -
- Advertisement -

ರೈತ ಚಳವಳಿಯ ಸಂದರ್ಭದಲ್ಲಿ ರಚಿತವಾದ, ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ‘ಕಿಸಾನ್‌ ಏಕ್ತಾ ಮೋರ್ಚಾ’ (@Kisanektamorcha), ‘ಟ್ರಾಕ್ಟರ್‌2ಟ್ವಿಟರ್‌’ (@Tractor2twitr) ಖಾತೆಗಳನ್ನು ಭಾರತದಲ್ಲಿ ಟ್ವಿಟರ್‌ ಸಂಸ್ಥೆ ತಡೆಹಿಡಿದಿದೆ.

“ಭಾರತದ ಸ್ಥಳೀಯ ಕಾನೂನುಗಳ ಅಡಿಯಲ್ಲಿ ಟ್ವಿಟರ್‌ನ ಹೊಣೆಗಾರಿಕೆಯನ್ನು ಪಾಲಿಸಲು, ನಾವು ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ- 2000ರ ಅಡಿಯಲ್ಲಿ ಭಾರತದಲ್ಲಿ ಈ ಖಾತೆಯನ್ನು ತಡೆಹಿಡಿದಿದ್ದೇವೆ” ಎಂದು ಟ್ವಿಟರ್‌ ಸಂಸ್ಥೆ ತಿಳಿಸಿದೆ.

ಈ ಕುರಿತು ರೈತ ನಾಯಕ ಯೋಗೇಂದ್ರ ಯಾದವ್‌ ಟ್ವೀಟ್ ಮಾಡಿದ್ದು, ಟ್ವಿಟರ್‌ ನಡೆಯನ್ನು ಖಂಡಿಸಿದ್ದಾರೆ. “ಮೋದಿ ಸರ್ಕಾರ ಅಧಿಕೃತವಾಗಿ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವ ಆಚರಿಸುತ್ತಿದೆ” ಎಂದು ಆರೋಪಿಸಿದ್ದಾರೆ. “ರೈತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಖಾತೆಗಳನ್ನು ತಡೆ ಹಿಡಿಯಲಾಗುತ್ತಿದೆ. ಏನಾಗುತ್ತಿದೆ?” ಎಂದು ಪ್ರಶ್ನಿಸಿರುವ ಅವರು ಟ್ವಿಟರ್‌ ಇಂಡಿಯಾ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಇಷ್ಟೇ ಅಲ್ಲದೆ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೂ ಟ್ವಿಟರ್‌ ಸಂಸ್ಥೆ ಈ ರೀತಿಯ ನೋಟಿಸ್‌ ಕಳುಹಿಸಿದೆ. ತಮಗೆ ಬಂದಿರುವ ನೋಟಿಸ್‌ ಪ್ರತಿಯನ್ನು ರಾಣಾ ಅಯೂಬ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಿಸಾನ್‌ಏಕ್ತಾಮೋರ್ಚಾ’ ಹಾಗೂ ‘ಟ್ರಾಕ್ಟರ್‌2ಟ್ವಿಟರ್‌’ ಖಾತೆಗಳಿಗೆ ನೀಡಿರುವ ಕಾರಣಗಳನ್ನೇ ಇಲ್ಲಿಯೂ ನೀಡಲಾಗಿದೆ.

“ಹಲೋ ಟ್ವಿಟರ್, ನಿಜವಾಗಿಯೂ ಏನಿದು?” ಎಂದು ರಾಣಾ ಅಯೂಬ್‌ ಪ್ರಶ್ನಿಸಿದ್ದಾರೆ.

“ನಮ್ಮ ಸೇವೆಯನ್ನು ಬಳಸುವ ಜನರ ದನಿಯನ್ನು ರಕ್ಷಿಸುವುದು, ಗೌರವಿಸುವುದು ಟ್ವಿಟರ್‌ನ ನಂಬಿಕೆ. ಯಾವುದಾದರೂ ವಿಷಯವನ್ನು ತೆಗೆದುಹಾಕಬೇಕೆಂದು ಅಧಿಕೃತ ಘಟಕದಿಂದ (ಕಾನೂನು ಜಾರಿ ಅಥವಾ ಸರ್ಕಾರಿ ಸಂಸ್ಥೆ) ನಾವು ಕಾನೂನು ವಿನಂತಿಯನ್ನು ಸ್ವೀಕರಿಸಿದರೆ ಖಾತೆದಾರರಿಗೆ ತಿಳಿಸುವುದು ನಮ್ಮ ಪಾಲಿಸಿಯಾಗಿದೆ. ಕೋರಿಕೆ ಕಳುಹಿಸಿರುವ ದೇಶದಲ್ಲಿ ಸದರಿ ಬಳಕೆದಾರರು ವಾಸಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸೂಚಿಸುತ್ತೇವೆ” ಎಂದು ರಾಣಾ ಅಯೂಬ್ ಅವರಿಗೆ ಬಂದಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಣಾ ಅಯೂಬ್‌ ಅವರ ಟ್ವೀಟ್‌ಗೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಟೆನ್ನಿಸ್ ದಂತಕಥೆ ಮಾರ್ಟಿನಾ ನವರಟೋಲಿನಾ ಪ್ರತಿಕ್ರಿಯಿಸಿದ್ದು, “ಹಾಗಾದರೆ ಮುಂದಿನವರು ಯಾರು? ಇದು ಭೀಕರವಾದದ್ದಷ್ಟೇ” ಎಂದು ಪೋಸ್ಟ್‌ ಮಾಡಿ ರಾಣಾ ಅಯೂಬ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...