Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...