Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...