Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...