Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...