Homeಮುಖಪುಟಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಯ ಮೇರೆಗೆ ಮುಜಫರ್‌‌ ನಗರದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ರೈತ ಬೆಂಬಲಿಗರು ಸೇರಿದ್ದರು. ಅದೇ ರೀತಿ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿಯೂ ಸಾವಿರಾರು ಸಂಖ್ಯೆಯಲ್ಲಿ ರೈತರು ಮತ್ತು ರೈತ ಬೆಂಬಲಿಗರು ಸೇರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ರೈತರು ಮಾಡುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದೆ.

ಗುರುವಾರ ರಾಕೇಶ್ ಟಿಕಾಯತ್ ಭಾವನಾತ್ಮಕವಾಗಿ ಮಾತನಾಡಿದ್ದು ಉತ್ತರಪ್ರದೇಶದ ರೈತರನ್ನು ಕೆರಳಿಸಿತ್ತು. ಈಗ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್ ರೈತರಿಗೆ ಮತ್ತೊಂದು ಭರವಸೆಯನ್ನು ನೀಡಿದೆ. ಗಣರಾಜ್ಯೋತ್ಸವದಲ್ಲಿ ನಡೆದ ಅಹಿತಕರ ಘಟನೆಗಳು ರೈತ ಚಳವಳಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ಸರ್ಕಾರ ಎಣಿಸಿತ್ತು. ಆದರೆ ಈಗ ಅದು ಸರ್ಕಾರಕ್ಕೇ ತಿರುಗು ಬಾಣವಾಗಿದೆ. ದೆಹಲಿಯ ಎಲ್ಲಾ ಗಡಿಗಳಲ್ಲಿಯೂ ಪ್ರತಿಭಟನೆಗೆ ಸೇರಿಕೊಳ್ಳುವವರ ಸಂಖ್ಯೆ ಏರುತ್ತಲೇ ಇದೆ. ದೆಹಲಿ-ಉತ್ತರಪ್ರದೇಶ ಗಡಿಯ ಗಾಜಿಪುರದಲ್ಲಂತೂ ಪ್ರತಿಭಟನಾಕಾರರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಯುವಜನತೆ- ವಿದ್ಯಾರ್ಥಿಗಳು ಅತಿ ಉತ್ಸಾಹದಲ್ಲಿದ್ದಾರೆ.

ಮಜಾಫರ್‌‌ ನಗರದ ಮಹಾಪಂಚಾಯತ್ ನಡೆದ ಒಂದು ದಿನದ ನಂತರ ಬಾಗ್‌ಪತ್‌ನಲ್ಲಿ ಮಹಾಪಂಚಾಯತ್ ಆಯೋಜಿಸಲಾಗಿದೆ. ಇದು ಜಾಟ್ ನಾಯಕ ಅಜಿತ್ ಸಿಂಗ್ ಮತ್ತು ಅವರ ಮಗ ಜಯಂತ್ ಅವರ ಭದ್ರಕೋಟೆ. ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯಮಂತ್ರಿಗಳು ಜಾಟ್ ಸಮುದಾಯಕ್ಕೆ ಸೇರಿದವರಲ್ಲವಾದ್ದರಿಂದ ಇದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಲಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜೀವ್ ಬಲ್ಯಾನ್ (ಈಗ ಕೇಂದ್ರ ಸಚಿವ) ಅವರನ್ನು ಬೆಂಬಲಿಸುವುದು ತಪ್ಪು ಎಂದು ಬಿಕೆಯು (ಟಿಕಾಯತ್) ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

ಇನ್ನು ಮಥುರಾದಲ್ಲಿಯೂ ಉತ್ತರಪ್ರದೇಶದ ಸಾವಿರಾರು ಜನರು ಸೇರಿ ಬೃಹತ್ ಮಹಾಪಂಚಾಯತ್ ಅನ್ನು ನಡೆಸಲಾಗಿತ್ತು. ಭಾರತೀಯ ಕಿಸಾನ್ ಯೂನಿಯನ್ (BKU) ಆಯೋಜಿಸಿದ್ದ ಈ ಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಲುವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಸೇರಿ ದೆಹಲಿ-ಆಗ್ರಾ ಯಮುನಾ ಹೆದ್ದಾರಿಯನ್ನು ನಿರ್ಬಂಧಿಸಲು ಯೋಜಿಸಲಾಗಿದೆ. ಈ ಕುರಿತು ಮುಂದಿನವಾರ ನಿಗದಿಪಡಿಸಲಾಗಿರುವ ಮತ್ತೊಂದು ಮಹಾಪಂಚಾಯತ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈ ಕುರಿತು ಮಾತನಾಡಿದ BKU ಜಿಲ್ಲಾಧ್ಯಕ್ಷ ರಾಜ್ ಕುಮಾರ್ ತೋಮರ್ “2 ತಿಂಗಳ ಆಂದೋಲನದ ನಂತರವೂ ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸದ ಕಾರಣ, ಈಗ ಸರ್ಕಾರ ಮೇಲೆ ಹೆಚ್ಚಿನ ಒತ್ತಡ ಹೇರಬೇಕಿದೆ. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿ ರೈತ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರೂ ಸೇರಬೇಕು ಎಂದು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ ನೀಡಿದ ಪ್ರಸ್ತಾವನೆಯನ್ನು ಮಹಾಪಂಚಾಯತ್ ಸ್ವಾಗತಿಸಿದೆ. ಈ ಕುರಿತು ಅಂತಿಮ ತೀರ್ಮಾನವನ್ನು ಮುಂದಿನ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ರಾಕೇಶ್ ಟಿಕಾಯತ್ ಅವರ ಹಿಂದೆ ಎಲ್ಲಾ ರೈತರು ಇದ್ದಾರೆ. ದೆಹಲಿಯ ಹಿಂಸಾಚಾರಕ್ಕೆ ಸರ್ಕಾರ ರೈತರನ್ನು ಹೊಣೆಗಾರರನ್ನಾಗಿ ಮಾಡಬಾರದು. ಅಪರಾಧಿಗಳನ್ನ ಶಿಕ್ಷಿಸಬೇಕೇ ಹೊರತು ರೈತ ಸಮುದಾಯವನ್ನು ಗುರಿಯಾಗಿಸಿಕೊಳ್ಳಬಾರದು. ಸಾಮಾಜಿಕವಾಗಿ ಬಿಜೆಪಿ ನಾಯಕರನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ” ಎಂದು BKU ನಾಯಕರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಜಯಂತ್ ಚೌಧರಿ ತಮ್ಮ ಭಾಷಣದಲ್ಲಿ, “ನಾನು ಮಥುರಾದಲ್ಲಿ ಒಂದು ವಾರ ಪ್ರಚಾರ ಮಾಡಿ ಗಾಜಿಪುರ ಗಡಿ ಮತ್ತು ಪಾಲ್ವಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೇರಿಕೊಳ್ಳುವಂತೆ ರೈತರನ್ನು ಪ್ರೇರೇಪಿಸುತ್ತೇನೆ” ಎಂದು ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನಕ್ಕೆ ಬೆಂಬಲವನ್ನು ನೀಡಲು ಯುಪಿಯ ಬಿಜ್ನೋರ್ ಮತ್ತು ಹರಿಯಾಣದ ಜಿಂದ್ ಜಿಲ್ಲೆಗಳಲ್ಲಿ ಇನ್ನೂ ಎರಡು ಮಹಾಪಂಚಾಯತ್‌ಗಳನ್ನು ಯೋಜಿಸಲಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ಭಾನುವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...