Homeಮುಖಪುಟಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಯ ಮೇರೆಗೆ ಮುಜಫರ್‌‌ ನಗರದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ರೈತ ಬೆಂಬಲಿಗರು ಸೇರಿದ್ದರು. ಅದೇ ರೀತಿ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿಯೂ ಸಾವಿರಾರು ಸಂಖ್ಯೆಯಲ್ಲಿ ರೈತರು ಮತ್ತು ರೈತ ಬೆಂಬಲಿಗರು ಸೇರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ರೈತರು ಮಾಡುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದೆ.

ಗುರುವಾರ ರಾಕೇಶ್ ಟಿಕಾಯತ್ ಭಾವನಾತ್ಮಕವಾಗಿ ಮಾತನಾಡಿದ್ದು ಉತ್ತರಪ್ರದೇಶದ ರೈತರನ್ನು ಕೆರಳಿಸಿತ್ತು. ಈಗ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್ ರೈತರಿಗೆ ಮತ್ತೊಂದು ಭರವಸೆಯನ್ನು ನೀಡಿದೆ. ಗಣರಾಜ್ಯೋತ್ಸವದಲ್ಲಿ ನಡೆದ ಅಹಿತಕರ ಘಟನೆಗಳು ರೈತ ಚಳವಳಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ಸರ್ಕಾರ ಎಣಿಸಿತ್ತು. ಆದರೆ ಈಗ ಅದು ಸರ್ಕಾರಕ್ಕೇ ತಿರುಗು ಬಾಣವಾಗಿದೆ. ದೆಹಲಿಯ ಎಲ್ಲಾ ಗಡಿಗಳಲ್ಲಿಯೂ ಪ್ರತಿಭಟನೆಗೆ ಸೇರಿಕೊಳ್ಳುವವರ ಸಂಖ್ಯೆ ಏರುತ್ತಲೇ ಇದೆ. ದೆಹಲಿ-ಉತ್ತರಪ್ರದೇಶ ಗಡಿಯ ಗಾಜಿಪುರದಲ್ಲಂತೂ ಪ್ರತಿಭಟನಾಕಾರರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಯುವಜನತೆ- ವಿದ್ಯಾರ್ಥಿಗಳು ಅತಿ ಉತ್ಸಾಹದಲ್ಲಿದ್ದಾರೆ.

ಮಜಾಫರ್‌‌ ನಗರದ ಮಹಾಪಂಚಾಯತ್ ನಡೆದ ಒಂದು ದಿನದ ನಂತರ ಬಾಗ್‌ಪತ್‌ನಲ್ಲಿ ಮಹಾಪಂಚಾಯತ್ ಆಯೋಜಿಸಲಾಗಿದೆ. ಇದು ಜಾಟ್ ನಾಯಕ ಅಜಿತ್ ಸಿಂಗ್ ಮತ್ತು ಅವರ ಮಗ ಜಯಂತ್ ಅವರ ಭದ್ರಕೋಟೆ. ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯಮಂತ್ರಿಗಳು ಜಾಟ್ ಸಮುದಾಯಕ್ಕೆ ಸೇರಿದವರಲ್ಲವಾದ್ದರಿಂದ ಇದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಲಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜೀವ್ ಬಲ್ಯಾನ್ (ಈಗ ಕೇಂದ್ರ ಸಚಿವ) ಅವರನ್ನು ಬೆಂಬಲಿಸುವುದು ತಪ್ಪು ಎಂದು ಬಿಕೆಯು (ಟಿಕಾಯತ್) ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

ಇನ್ನು ಮಥುರಾದಲ್ಲಿಯೂ ಉತ್ತರಪ್ರದೇಶದ ಸಾವಿರಾರು ಜನರು ಸೇರಿ ಬೃಹತ್ ಮಹಾಪಂಚಾಯತ್ ಅನ್ನು ನಡೆಸಲಾಗಿತ್ತು. ಭಾರತೀಯ ಕಿಸಾನ್ ಯೂನಿಯನ್ (BKU) ಆಯೋಜಿಸಿದ್ದ ಈ ಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಲುವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಸೇರಿ ದೆಹಲಿ-ಆಗ್ರಾ ಯಮುನಾ ಹೆದ್ದಾರಿಯನ್ನು ನಿರ್ಬಂಧಿಸಲು ಯೋಜಿಸಲಾಗಿದೆ. ಈ ಕುರಿತು ಮುಂದಿನವಾರ ನಿಗದಿಪಡಿಸಲಾಗಿರುವ ಮತ್ತೊಂದು ಮಹಾಪಂಚಾಯತ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈ ಕುರಿತು ಮಾತನಾಡಿದ BKU ಜಿಲ್ಲಾಧ್ಯಕ್ಷ ರಾಜ್ ಕುಮಾರ್ ತೋಮರ್ “2 ತಿಂಗಳ ಆಂದೋಲನದ ನಂತರವೂ ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸದ ಕಾರಣ, ಈಗ ಸರ್ಕಾರ ಮೇಲೆ ಹೆಚ್ಚಿನ ಒತ್ತಡ ಹೇರಬೇಕಿದೆ. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿ ರೈತ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರೂ ಸೇರಬೇಕು ಎಂದು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ ನೀಡಿದ ಪ್ರಸ್ತಾವನೆಯನ್ನು ಮಹಾಪಂಚಾಯತ್ ಸ್ವಾಗತಿಸಿದೆ. ಈ ಕುರಿತು ಅಂತಿಮ ತೀರ್ಮಾನವನ್ನು ಮುಂದಿನ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ರಾಕೇಶ್ ಟಿಕಾಯತ್ ಅವರ ಹಿಂದೆ ಎಲ್ಲಾ ರೈತರು ಇದ್ದಾರೆ. ದೆಹಲಿಯ ಹಿಂಸಾಚಾರಕ್ಕೆ ಸರ್ಕಾರ ರೈತರನ್ನು ಹೊಣೆಗಾರರನ್ನಾಗಿ ಮಾಡಬಾರದು. ಅಪರಾಧಿಗಳನ್ನ ಶಿಕ್ಷಿಸಬೇಕೇ ಹೊರತು ರೈತ ಸಮುದಾಯವನ್ನು ಗುರಿಯಾಗಿಸಿಕೊಳ್ಳಬಾರದು. ಸಾಮಾಜಿಕವಾಗಿ ಬಿಜೆಪಿ ನಾಯಕರನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ” ಎಂದು BKU ನಾಯಕರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಜಯಂತ್ ಚೌಧರಿ ತಮ್ಮ ಭಾಷಣದಲ್ಲಿ, “ನಾನು ಮಥುರಾದಲ್ಲಿ ಒಂದು ವಾರ ಪ್ರಚಾರ ಮಾಡಿ ಗಾಜಿಪುರ ಗಡಿ ಮತ್ತು ಪಾಲ್ವಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೇರಿಕೊಳ್ಳುವಂತೆ ರೈತರನ್ನು ಪ್ರೇರೇಪಿಸುತ್ತೇನೆ” ಎಂದು ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನಕ್ಕೆ ಬೆಂಬಲವನ್ನು ನೀಡಲು ಯುಪಿಯ ಬಿಜ್ನೋರ್ ಮತ್ತು ಹರಿಯಾಣದ ಜಿಂದ್ ಜಿಲ್ಲೆಗಳಲ್ಲಿ ಇನ್ನೂ ಎರಡು ಮಹಾಪಂಚಾಯತ್‌ಗಳನ್ನು ಯೋಜಿಸಲಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ಭಾನುವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...