Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...