Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...