Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...