Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...