Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...