Homeಕ್ರೀಡೆಕ್ರಿಕೆಟ್ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

- Advertisement -
- Advertisement -

2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್‌ಗಳು ಸ್ಕ್ರೀಸ್‌ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ ಭಾರತ ಗೆಲುವು ಕಂಡಿತು.

ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯವೂ ಸೇರಿದಂತೆ ಭಾರತದ ಪಂದ್ಯಗಳೆಲ್ಲವೂ ಒನ್ ಸೈಡೆಡ್ ಆಗಿತ್ತು. ಆದರೆ ಸೆಮಿಫೈನಲ್ ಸವಾಲು ಸುಲಭವಾಗಿರಲಿಲ್ಲ. ಡರಿಲ್ ಮೆಚಿಲ್ ಶತಕ, ನಾಯಕ ವಿಲಿಯಮ್ಸನ್ ಹಾಫ್ ಸೆಂಚುರಿ ನಡುವೆಯೂ ಭಾರತದ ಸಂಘಟಿತ ದಾಳಿ ಫಲ ನೀಡಿತು. ನ್ಯೂಜಿಲೆಂಡ್ ತಂಡವನ್ನು 327 ರನ್‌ಗೆ ಕಟ್ಟಿಹಾಕಿತು. ಈ ಮೂಲಕ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಭಾರತದ ಪರ ಅದ್ಭುತ ಬ್ಯಾಟಿಂಗ್ ಮೂಡಿಬಂದಿತು. ವಿರಾಟ್ ಕೊಹ್ಲಿ ಶತಕ, ಶ್ರೇಯಸ್ ಅಯ್ಯರ್ ಸೆಂಚುರಿ, ಶುಭಮನ್ ಗಿಲ್ 80 ರನ್ ಸೇರಿದಂತೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್‌ನಿಂದ 397 ರನ್ ಸಿಡಿಸಿತ್ತು. ನ್ಯೂಜಿಲೆಂಡ್ ತಂಡಕ್ಕೆ 398 ರನ್ ಟಾರ್ಗೆಟ್ ನೀಡಲಾಗಿತ್ತು.

ಭಾರತ ತಂಡ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿದರು. 30 ರನ್ ಸಿಡಿಸುವಷ್ಟರಲ್ಲೇ ನ್ಯೂಜಿಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಶಮಿ ದಾಳಿಗೆ ಡೆವೋನ್ ಕೊನ್ವೆ ವಿಕೆಟ್ ಪತನಗೊಂಡಿತು. ಡೆವೋನ್ 13 ರನ್ ಗಳಿಸಿ ಔಟಾದರು.

ಮತ್ತೆ ದಾಳಿ ಮುಂದುವರಿಸಿದ ಮೊಹಮ್ಮದ್ ಶಮಿ ಅದ್ಭುತ ಫಾರ್ಮ್‌ನಲ್ಲಿದ್ದ ರಚಿನ್ ರವೀಂದ್ರ ವಿಕೆಟ್ ಕಬಳಿಸಿದರು. ರಚಿನ್ ಕೂಡ 13 ರನ್‌ಗೆ ಔಟಾದರು. 39 ರನ್‌ಗೆ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರಿಲ್ ಮೆಚೆಲ್ ಜೊತೆಯಾಟ ಟೀಂ ಇಂಡಿಯಾಗೆ ಭಯ ಹುಟ್ಟಿಸಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಬೌಲರ್ಸ್ ಸುಸ್ತಾದರು.

ಶತಕದ ಬಳಿಕವೂ ಅಬ್ಬರಿಸುತ್ತಿದ್ದ ಡರಿಲ್ ಮಿಚೆಲ್ ಭಾರತಕ್ಕೆ ಆತಂಕ ಹೆಚ್ಚಿಸುತ್ತಲೇ ಇದ್ದರು. ಮಿಚೆಲ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ತಂಡದಲ್ಲಿ ಸೋಲಿನ ಭೀತಿ ಆರಂಭವಾಗಿತ್ತು. ಇತ್ತ  ವಿಲಿಯಮ್ಸನ್ ಹಾಗೂ ಮಿಚೆಲ್ ಜೊತೆಯಾಟದಿಂದ ನ್ಯೂಜಿಲೆಂಡ್‌ಗೆ ಗೆಲುವಿನ ಆತ್ಮವಿಶ್ವಾಸ ಹೆಚ್ಚಿತ್ತು. ಆದರೆ ಮೊಹಮ್ಮದ್ ಶಮಿ 134 ರನ್ ಸಿಡಿಸಿ ಗಟ್ಟಿಯಾಗಿ ನಿಂತಿದ್ದ ಮಿಚೆಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಪರಿಣಾಮ ನ್ಯೂಜಿಲೆಂಡ್ ದಾಖಲೆಯ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತ್ತು.

ಕೇನ್ ವಿಲಿಯಮ್ಸನ್ 69 ರನ್ ಸಿಡಿಸಿ ನಿರ್ಗಮಿಸಿದರು. ಮಿಚೆಲ್ ಹಾಗೂ ಕೇನ್ 181 ರನ್ ಜೊತೆಯಾಟ ಅಂತ್ಯಗೊಂಡಿತು. ಇತ್ತ ಭಾರತ ತಂಡ ಗೆಲುವಿನತ್ತ ಮುಖ ಮಾಡಿತು. ವಿಲಿಯಮ್ಸನ್ ಬೆನ್ನಲ್ಲೇ ಟಾಮ್ ಲಾಥಮ್ ವಿಕೆಟ್ ಕಬಳಿಸಿದ ಶಮಿ, ಭಾರತಕ್ಕೆ ಭರ್ಜರಿ ಮುನ್ನಡೆ ತಂದುಕೊಟ್ಟರು. ಇತ್ತ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಜೊತೆಯಾಟ ಆರಂಭಗೊಂಡಿತು. ಈ ಜೋಡಿಯನ್ನು ಜಸ್ಪ್ರೀತ್ ಬುಮ್ರಾ ಬ್ರೇಕ್ ಮಾಡಿದರು.

ಪಿಲಿಪ್ಸ್ 41 ರನ್ ಸಿಡಿಸಿ ಔಟಾದರು. ಮಾರ್ಕ್ ಚಂಪನ್ ಕೇವಲ 2 ರನ್ ಸಿಡಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಹಾಗೂ ಫರ್ಗ್ಯೂಸನ್ ವಿಕೆಟ್ ಕಬಲಿಸದ ಶಮಿ, ನ್ಯೂಜಿಲೆಂಡ್ ತಂಡವನ್ನು 48.5 ಓವರ್‌ಗಳಲ್ಲಿ 327 ರನ್‌ಗೆ ಆಲೌಟ್ ಮಾಡಿದರು.  ಭಾರತ 70 ರನ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿತು. 2011ರ ಬಳಿಕ ಭಾರತ ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು.

ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಮಿಂಚಿದರು. ವಿಶ್ವಕಪ್ ಟೂರ್ನಿಯಲ್ಲಿ ಅತೀ ಕಡಿಮೆ ಇನ್ನಿಂಗ್ಸ್ನಲ್ಲಿ 50 ವಿಕೆಟ್ ಸಾಧನೆ ಮಾಡಿದ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಶಮಿ 17 ಇನ್ನಿಂಗ್ಸ್‌ನಲ್ಲಿ 50 ವಿಕೆಟ್ ಸಾಧನೆ ಮಾಡಿದ್ದಾರೆ.

ಸಚಿನ್ ದಾಖಲೆ ಮುರಿದ ವಿರಾಟ್

ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸ್ಟಾರ್‌ ವಿರಾಟ್‌ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಹೆಸರಲ್ಲಿ ಎರಡು ದಶಕ ಕಾಲ ಉಳಿದಿದ್ದ ವಿಶ್ವ ದಾಖಲೆಯನ್ನು ವಿರಾಟ್‌ ಕೊಹ್ಲಿ ಅಳಿಸಿಹಾಕಿದ್ದಾರೆ.

2003ರ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್ ಭಾರತ ತಂಡದ ಪರ 673 ರನ್‌ಗಳನ್ನು ಬಾರಿಸಿದ್ದರು. ಈ ದಾಖಲೆಯನ್ನು 2023ರಲ್ಲಿ ವಿರಾಟ್ ಕೊಹ್ಲಿ 711* ರನ್‌ ಗಳಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. 13ನೇ ಆವೃತ್ತಿಯ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಿದ 113 ಎಸೆತಗಳಲ್ಲಿ 9 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 117 ರನ್‌ ಬಾರಿಸಿದ ವಿರಾಟ್‌ ಕೊಹ್ಲಿ, ಈ ಮನಮೋಹಕ ಇನಿಂಗ್ಸ್‌ ವೇಳೆ ದಾಖಲೆಗಳ ಮೇಲೆ ದಾಖಲೆ ಬರೆದರು.

ಇದು ವಿರಾಟ್‌ ಕೊಹ್ಲಿ ಬಾರಿಸಿದ ವಿಶ್ವ ದಾಖಲೆಯ 50ನೇ ಒಡಿಐ ಶತಕವಾಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. ಈ ಶತಕದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಒಟ್ಟು 3 ಶತಕಗಳೊಂದಿಗೆ 101.57ರ ಸರಾಸರಿಯಲ್ಲಿ ಒಟ್ಟಾರೆ 711 ರನ್‌ ಬಾರಿಸಿದ್ದಾರೆ. ವಿಶ್ವಕಪ್‌ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ 700ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ದಾಖಲೆ ಈಗ ಕೊಹ್ಲಿ ಪಾಲಾಗಿದೆ.

ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌

ವಿಶ್ವಕಪ್‌ ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ವಿರಾಟ್‌ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ 7 ಬಾರಿ ಈ ಸಾಧನೆ ಮಾಡಿ ಸಚಿನ್‌ ಮತ್ತು ಬಾಂಗ್ಲಾದೇಶದ ಆಲ್‌ರೌಂಡರ್ ಶಕಿಬ್ ಅಲ್ ಹಸನ್‌ ಜೊತೆಗೆ ದಾಖಲೆ ಹಂಚಿಕೊಂಡಿದ್ದರು. ಇದೀಗ 3 ಶತಕ ಮತ್ತು 5 ಅರ್ಧಶತಕಗಳೊಂದಿಗೆ ಒಟ್ಟಾರೆ 8 ಬಾರಿ ಒಂದೇ ಆವೃತ್ತಿಯಲ್ಲಿ 50ಕ್ಕೂ ಹೆಚ್ಚು ರನ್‌ ಬಾರಿಸಿ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...