Homeಮುಖಪುಟಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣ: ಕುಮಾರಸ್ವಾಮಿ ಆರೋಪ

ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣ: ಕುಮಾರಸ್ವಾಮಿ ಆರೋಪ

ಈ ಬಾರಿ ಪಕ್ಷದ ನಿಷ್ಠಾವಂತನಿಗೆ ಟಿಕೆಟ್‌ ಕೊಡಬೇಕು ಎಂದು ಭಾವಿಸಿದ್ದೆ ಹಾಗಾಗಿ ಕೃಷ್ಣಮೂರ್ತಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿದೆ

- Advertisement -
- Advertisement -

ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೆ ಕಾರಣ. ಅವರ ಪಕ್ಷದ ಶಾಸಕರ ಮನೆಗೆ ಬೆಂಕಿ ಇಟ್ಟು, ಜೀವಹಾನಿ ಮಾಡಲು ಹೊರಟ ಕಾಂಗ್ರೆಸ್ ನಾಯಕರು, ಬೆಂಗಳೂರನ್ನು ರಕ್ಷಣೆ ಮಾಡುತ್ತೇವೆ ಎಂದು ಯಾವ ಮುಖವಿಟ್ಟುಕೊಂಡು ಮತ ಕೇಳಲು ಹೋಗುತ್ತಾರೆ ಎಂದು ಹೆಚ್‌‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆಯ ಹಿನ್ನೆಲೆಯಲ್ಲಿ, ರಾಜರಾಜೇಶ್ವರಿ ನಗರ ಬಿಬಿಎಂಪಿ ಕಚೇರಿಗೆ ತಮ್ಮ ಪಕ್ಷದ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಅವರ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ: ಪಾರದರ್ಶಕ ಸತ್ಯಶೋಧನೆಯ ವಿಶಿಷ್ಟ ಪ್ರಯೋಗ

“ಈ ಕ್ಷೇತ್ರದಲ್ಲಿ ಪ್ರತೀ ಭಾರಿಯೂ ಬೇರೆ ಬೇರೆ ಪಕ್ಷದಿಂದ ಬಂದು ಜೆಡಿಎಸ್‌ನಿಂದ ಟಿಕೆಟ್ ಪಡೆದು ಚುನಾವಣೆಯ ನಂತರ ಬೇರೆ ಪಕ್ಷಗಳಿಗೆ ಹೋಗಿಬಿಡುತ್ತಿದ್ದರು. ಆದ್ದರಿಂದ ಇದು ಆಗಬಾರದು ಎಂದು ಈ ಬಾರಿ ಪಕ್ಷದ ನಿಷ್ಠಾವಂತನಿಗೆ ಟಿಕೆಟ್‌ ಕೊಡಬೇಕು ಎಂದು ಭಾವಿಸಿದ್ದೆ ಹಾಗಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಕೃಷ್ಣಮೂರ್ತಿಗೆ ಟಿಕೆಟ್ ನೀಡಲಾಗಿದೆ” ಎಂದು ಹೇಳಿದರು.

ಚುನಾವಣೆಯಲ್ಲಿ ವೈಯಕ್ತಿವಾಗಿ ಮಾತನಾಡುವುದು ಅನವಶ್ಯಕ, ಅದರಿಂದ ಏನೂ ಉಪಯೋಗವಿಲ್ಲ. ನಮ್ಮ ಪಕ್ಷದ ಸಾಧನೆಗಳು, ಕಾಂಗ್ರೆಸ್ ಬಿಜೆಪಿ ವೈಫಲ್ಯಗಳ ಬಗ್ಗೆ ಚರ್ಚೆ ನಡೆಯಬೇಕು ಎಂದ ಅವರು, “ಕೆಜೆ ಹಳ್ಳಿ ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೆ ಕಾರಣ. ಅವರ ಪಕ್ಷದ ಶಾಸಕರ ಮನೆಗೆ ಬೆಂಕಿ ಇಟ್ಟು, ಜೀವಹಾನಿ ಮಾಡಲು ಹೊರಟ ಕಾಂಗ್ರೆಸ್ ನಾಯಕರು, ಬೆಂಗಳೂರನ್ನು ರಕ್ಷಣೆ ಮಾಡುತ್ತೇವೆ ಎಂದು ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಾರೆ” ಎಂದು ಹೇಳಿದರು.

ನಂತರ ಬಿಜೆಪಿ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಮಳೆಯಿಂದಾಗಿ ಬೆಂಗಳೂರಿನ ಹಲವಾರು ಬಡಾವಣೆಗಳು ಜಲಾವೃತವಾದವು, ಆಡಳಿತ ಪಕ್ಷ ಬಿಜೆಪಿ ಯಾರಿಗೂ ಪರಿಹಾರ ನೀಡಿಲ್ಲ. ಕೊರೊನಾ ಸಮಯದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ, ಹಲವಾರು ಉತ್ತಮವಾದ ಸಲಹೆಗಳನ್ನು ಕೊಟ್ಟರೂ, ಕೊರೊನಾ ಪರಿಸ್ಥಿತಿಯನ್ನು ಸುಧಾರಿಸಲು ಏನು ಮಾಡಿದೆ ಎಂದು ಜನರು ನೋಡುತ್ತಿದ್ದಾರೆ” ಎಂದು ಅವರು ಹೇಳಿದರು.

ರಾಜರಾಜೇಶ್ವರಿ ನಗರದಲ್ಲಿ ನವೆಂಬರ್‌ 3 ರಂದು ಉಪಚುನಾವಣೆ ನಡೆಯಲಿದ್ದು, ನ. 10 ಕ್ಕೆ ಫಲಿತಾಂಶ ಬರಲಿದೆ.

ಇದನ್ನೂ ಓದಿ: ಡಿಜೆ ಹಳ್ಳಿ, ಶೃಂಗೇರಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...