Homeಕರ್ನಾಟಕಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

- Advertisement -
- Advertisement -

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎನ್ನುತ್ತಾರೆ ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್.

ʼನಂದಿನಿʼ ಹಾಲು ಉತ್ಪನ್ನಗಳ ಹೆಸರಾದ ಕೆಎಂಎಫ್‌ಅನ್ನು ಗುಜರಾತಿನ ʼಅಮುಲ್‌ʼ ಬ್ರಾಂಡಿನ ಹಾಲು ಉತ್ಪಾದಕ ಸಂಸ್ಥೆಯಾದ ಗುಜರಾತ್‌ ಸಹಕಾರ ಹಾಲು ಮಾರಾಟ ಒಕ್ಕೂಟ(ಜಿಸಿಎಂಎಂಎಫ್)ದೊಂದಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಡಿರುವುದಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ಕಳೆದ ಅಕ್ಟೋಬರ್‌ 9ರಂದು ಅಸ್ಸಾಂನ ಗುವಾಹಟಿಯಲ್ಲಿ ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಅಮಿತ್‌ ಶಾ ಅವರು ಮೊದಲ ಬಾರಿಗೆ ಈ ಕುರಿತು ಮಾತನಾಡಿದ್ದರು. “ದೇಶದ ನೈಸರ್ಗಿಕ ಉತ್ಪನ್ನಗಳಿಗೆ ವಿದೇಶಗಳಲ್ಲಿ ಮಾನ್ಯತೆ ಪಡೆಯಲು ಕೆಎಂಎಫ್‌ ಸೇರಿದಂತೆ ದೇಶದ ಪ್ರಮುಖ ಐದು ಸಹಕಾರ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ಬಹುರಾಜ್ಯ ಸಹಕಾರ ಒಕ್ಕೂಟ ರಚಿಸಲು ಉದ್ದೇಶಿಸಲಾಗಿದೆ” ಎಂದಿದ್ದರು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದ ಮೆಗಾ ಡೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್‌ ಶಾ, “ಗುಜರಾತಿನ ಅಮುಲ್‌ ಸಹಕಾರ ಒಕ್ಕೂಟ ಪ್ರಗತಿಯ ಹಾದಿಯಲ್ಲಿದೆ. ಕರ್ನಾಟಕದ ನಂದಿನಿಯ ಕೆಎಂಎಫ್‌ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್‌ ಮತ್ತು ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ಆ ಹಿನ್ನೆಲೆಯಲ್ಲಿ ಅಮುಲ್‌ ಜೊತೆ ನಂದಿನಿಯನ್ನು ವಿಲೀನ ಮಾಡಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರೊ.ಎಂ.ಎಸ್.ಶ್ರೀರಾಮ್‌, “ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೊಡ್ಡವರ ಬಳಿ ಚಿಕ್ಕವರು ಸೇರಿಕೊಂಡರೆ ದೊಡ್ಡವರ ಮಾತೇ ಹೆಚ್ಚು ನಡೆಯುತ್ತದೆ. ಕಿರಾಣಿ ಅಂಗಣಿ ಚೆನ್ನಾಗಿಯೇ ನಡೆಯುತ್ತಿರುವಾಗ, ಸೂಪರ್‌ ಮಾರ್ಕೆಟ್‌ನಲ್ಲಿ ಹೋಗಿ ಸಿಕ್ಕಿಕೊಳ್ಳುವ ಅಗತ್ಯವಿಲ್ಲ. ಅಮುಲ್‌ನಿಂದ ನಂದಿನಿ ಕಲಿಯಬೇಕಾದ ಯಾವುದೇ ಪಾಠವಿಲ್ಲ. ಮೊದಲೆಲ್ಲ ಅಮುಲ್ ರಾಜಕೀಯದಿಂದ ಸ್ವಲ್ಪ ದೂರವಿತ್ತು. ಆದರೀಗ ಸಂಪೂರ್ಣವಾಗಿ ರಾಜಕೀಯ ನಡೆಯುತ್ತಿದೆ. ಕೆಎಂಎಫ್‌ನಲ್ಲಿ ಮೊದಲಿನಿಂದಲೂ ರಾಜಕೀಯವಿತ್ತು. ಆದರೆ ಅಮುಲ್‌ನಿಂದ ಇವರು ಕಲಿಯುವಂತಹದ್ದು ಏನೂ ಇಲ್ಲ” ಎಂದರು.

“ಅಮುಲ್ ಈಗ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಘಟಕಗಳನ್ನು ತೆರೆದು ವ್ಯವಹರಿಸುತ್ತಿದೆ. ಯುಪಿ, ಹರಿಯಾಣ, ಪಂಜಾಬ್, ಬಿಹಾರದಲ್ಲಿ ಅಮುಲ್‌ ಘಟಕಗಳನ್ನು ತೆರೆಯಲಾಗಿದೆ. ಅದೀಗ ಅಮುಲ್‌ ಗುಜರಾತಿನ ಸಂಸ್ಥೆಯಾಗಿ ಉಳಿದಿಲ್ಲ. ಗುಜರಾತ್‌ ರೈತರಿಂದ ಮಾತ್ರ ಹಾಲು ಖರೀದಿಸುವಂತಿದ್ದರೆ ಅದು ಗುಜರಾತ್ ಸಂಸ್ಥೆಯಾಗಿ ಉಳಿಯುತ್ತಿತ್ತು. ಮಾರಾಟ ಎಲ್ಲಿ ಬೇಕಾದರೂ ಮಾಡಬಹುದು, ಆದರೆ ಎಲ್ಲಿಂದ ಹಾಲನ್ನು ಖರೀದಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳು ಕೇಂದ್ರೀಕರಣಕ್ಕೆ ಒತ್ತು ನೀಡುತ್ತಿವೆ. ಇದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ” ಎಂದು ಅಭಿಪ್ರಾಯಪಟ್ಟರು.

ಚಿಂತಕರಾದ ಶಿವಸಂದರ್‌ ಅವರು ಪ್ರತಿಕ್ರಿಯಿಸಿ, “ಸಹಕಾರಿ ಹಾಲು ಉತ್ಪನ್ನಗಳ ಮಾರುಕಟ್ಟೆ ದೊಡ್ಡ ಮಟ್ಟದಲ್ಲಿದೆ. ಸಹಕಾರಿ ಕ್ಷೇತ್ರವನ್ನು ಕಾರ್ಪೊರೇಟೀಕರಣ ಮಾಡಲು ಇಟ್ಟಿರುವ ಮೊದಲ ಹೆಜ್ಜೆ ಇದು. ಗುಜರಾತ್‌ ಬಿಟ್ಟರೆ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಹಕಾರಿ ಹಾಲು ಒಕ್ಕೂಟ ಬಲವಾಗಿದೆ. ಹೀಗಾಗಿ ಕಾರ್ಪೊರೇಟ್ ಶಕ್ತಿಗಳ ಕಣ್ಣು ಬಿದ್ದಿದೆ” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಅಮಿತ್‌ ಶಾ ಅವರ ಈ ಹೇಳಿಕೆಗೆ ಹಾಲು ಉತ್ಪಾದಕರು, ಮಾರಾಟಗಾರರು ಮತ್ತು ಕನ್ನಡಪರ ಸಂಘಸಂಸ್ಥೆಗಳಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಲಾಭದಲ್ಲಿರುವ ಮತ್ತು ಅದಕ್ಕಿಂತ ಮುಖ್ಯವಾಗಿ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರಾಂಡಿನ ಕೆಎಂಎಫ್‌ ಒಕ್ಕೂಟವನ್ನು ಯಾವ ಕಾರಣಕ್ಕೂ ಗುಜರಾತ್‌ನ ಅಮುಲ್‌ ಬ್ರಾಂಡಿನೊಂದಿಗೆ ವಿಲೀನ ಮಾಡಬಾರದು.

ದೇಶದ ರೈಲ್ವೆ, ವಿಮಾನ, ಹೆದ್ದಾರಿಗಳು, ಟೆಲಿಕಾಂ ವಲಯ ಸೇರಿದಂತೆ ಪ್ರತಿ ವಲಯದಲ್ಲಿ ಗುಜರಾತಿನ ಅಂಬಾನಿ ಮತ್ತು ಅದಾನಿ ಕಂಪನಿಗಳ ಏಕಸ್ವಾಮ್ಯಕ್ಕೆ ಅವಕಾಶ ಮಾಡಿಕೊಟ್ಟು, ಇಡೀ ದೇಶವನ್ನು ಗುಜರಾತಿನ ವಸಾಹತು ಮಾಡಿರುವವರು, ಇದೀಗ ಸಹಕಾರ ವಲಯವನ್ನೂ ಗುಜರಾತಿನ ಕೈವಶ ಮಾಡಲು ಹೊರಟಿದ್ದಾರೆ. ಕನ್ನಡಿಗರ ದಶಕಗಳ ಬದ್ಧತೆ ಮತ್ತು ಕಾಳಜಿಯಿಂದ ಕಟ್ಟಿದ ಕೆಎಂಎಫ್‌ ಲಾಭದಲ್ಲಿರುವಾಗಲೇ ಅದನ್ನು ವಶಪಡಿಸಿಕೊಳ್ಳುವ ಗುಜರಾತಿ ಹುನ್ನಾರ ಇದು ಎಂದು ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...