Homeಕರ್ನಾಟಕಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

- Advertisement -
- Advertisement -

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎನ್ನುತ್ತಾರೆ ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್.

ʼನಂದಿನಿʼ ಹಾಲು ಉತ್ಪನ್ನಗಳ ಹೆಸರಾದ ಕೆಎಂಎಫ್‌ಅನ್ನು ಗುಜರಾತಿನ ʼಅಮುಲ್‌ʼ ಬ್ರಾಂಡಿನ ಹಾಲು ಉತ್ಪಾದಕ ಸಂಸ್ಥೆಯಾದ ಗುಜರಾತ್‌ ಸಹಕಾರ ಹಾಲು ಮಾರಾಟ ಒಕ್ಕೂಟ(ಜಿಸಿಎಂಎಂಎಫ್)ದೊಂದಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಡಿರುವುದಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ಕಳೆದ ಅಕ್ಟೋಬರ್‌ 9ರಂದು ಅಸ್ಸಾಂನ ಗುವಾಹಟಿಯಲ್ಲಿ ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಅಮಿತ್‌ ಶಾ ಅವರು ಮೊದಲ ಬಾರಿಗೆ ಈ ಕುರಿತು ಮಾತನಾಡಿದ್ದರು. “ದೇಶದ ನೈಸರ್ಗಿಕ ಉತ್ಪನ್ನಗಳಿಗೆ ವಿದೇಶಗಳಲ್ಲಿ ಮಾನ್ಯತೆ ಪಡೆಯಲು ಕೆಎಂಎಫ್‌ ಸೇರಿದಂತೆ ದೇಶದ ಪ್ರಮುಖ ಐದು ಸಹಕಾರ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ಬಹುರಾಜ್ಯ ಸಹಕಾರ ಒಕ್ಕೂಟ ರಚಿಸಲು ಉದ್ದೇಶಿಸಲಾಗಿದೆ” ಎಂದಿದ್ದರು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದ ಮೆಗಾ ಡೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್‌ ಶಾ, “ಗುಜರಾತಿನ ಅಮುಲ್‌ ಸಹಕಾರ ಒಕ್ಕೂಟ ಪ್ರಗತಿಯ ಹಾದಿಯಲ್ಲಿದೆ. ಕರ್ನಾಟಕದ ನಂದಿನಿಯ ಕೆಎಂಎಫ್‌ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್‌ ಮತ್ತು ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ಆ ಹಿನ್ನೆಲೆಯಲ್ಲಿ ಅಮುಲ್‌ ಜೊತೆ ನಂದಿನಿಯನ್ನು ವಿಲೀನ ಮಾಡಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರೊ.ಎಂ.ಎಸ್.ಶ್ರೀರಾಮ್‌, “ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೊಡ್ಡವರ ಬಳಿ ಚಿಕ್ಕವರು ಸೇರಿಕೊಂಡರೆ ದೊಡ್ಡವರ ಮಾತೇ ಹೆಚ್ಚು ನಡೆಯುತ್ತದೆ. ಕಿರಾಣಿ ಅಂಗಣಿ ಚೆನ್ನಾಗಿಯೇ ನಡೆಯುತ್ತಿರುವಾಗ, ಸೂಪರ್‌ ಮಾರ್ಕೆಟ್‌ನಲ್ಲಿ ಹೋಗಿ ಸಿಕ್ಕಿಕೊಳ್ಳುವ ಅಗತ್ಯವಿಲ್ಲ. ಅಮುಲ್‌ನಿಂದ ನಂದಿನಿ ಕಲಿಯಬೇಕಾದ ಯಾವುದೇ ಪಾಠವಿಲ್ಲ. ಮೊದಲೆಲ್ಲ ಅಮುಲ್ ರಾಜಕೀಯದಿಂದ ಸ್ವಲ್ಪ ದೂರವಿತ್ತು. ಆದರೀಗ ಸಂಪೂರ್ಣವಾಗಿ ರಾಜಕೀಯ ನಡೆಯುತ್ತಿದೆ. ಕೆಎಂಎಫ್‌ನಲ್ಲಿ ಮೊದಲಿನಿಂದಲೂ ರಾಜಕೀಯವಿತ್ತು. ಆದರೆ ಅಮುಲ್‌ನಿಂದ ಇವರು ಕಲಿಯುವಂತಹದ್ದು ಏನೂ ಇಲ್ಲ” ಎಂದರು.

“ಅಮುಲ್ ಈಗ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಘಟಕಗಳನ್ನು ತೆರೆದು ವ್ಯವಹರಿಸುತ್ತಿದೆ. ಯುಪಿ, ಹರಿಯಾಣ, ಪಂಜಾಬ್, ಬಿಹಾರದಲ್ಲಿ ಅಮುಲ್‌ ಘಟಕಗಳನ್ನು ತೆರೆಯಲಾಗಿದೆ. ಅದೀಗ ಅಮುಲ್‌ ಗುಜರಾತಿನ ಸಂಸ್ಥೆಯಾಗಿ ಉಳಿದಿಲ್ಲ. ಗುಜರಾತ್‌ ರೈತರಿಂದ ಮಾತ್ರ ಹಾಲು ಖರೀದಿಸುವಂತಿದ್ದರೆ ಅದು ಗುಜರಾತ್ ಸಂಸ್ಥೆಯಾಗಿ ಉಳಿಯುತ್ತಿತ್ತು. ಮಾರಾಟ ಎಲ್ಲಿ ಬೇಕಾದರೂ ಮಾಡಬಹುದು, ಆದರೆ ಎಲ್ಲಿಂದ ಹಾಲನ್ನು ಖರೀದಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳು ಕೇಂದ್ರೀಕರಣಕ್ಕೆ ಒತ್ತು ನೀಡುತ್ತಿವೆ. ಇದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ” ಎಂದು ಅಭಿಪ್ರಾಯಪಟ್ಟರು.

ಚಿಂತಕರಾದ ಶಿವಸಂದರ್‌ ಅವರು ಪ್ರತಿಕ್ರಿಯಿಸಿ, “ಸಹಕಾರಿ ಹಾಲು ಉತ್ಪನ್ನಗಳ ಮಾರುಕಟ್ಟೆ ದೊಡ್ಡ ಮಟ್ಟದಲ್ಲಿದೆ. ಸಹಕಾರಿ ಕ್ಷೇತ್ರವನ್ನು ಕಾರ್ಪೊರೇಟೀಕರಣ ಮಾಡಲು ಇಟ್ಟಿರುವ ಮೊದಲ ಹೆಜ್ಜೆ ಇದು. ಗುಜರಾತ್‌ ಬಿಟ್ಟರೆ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಹಕಾರಿ ಹಾಲು ಒಕ್ಕೂಟ ಬಲವಾಗಿದೆ. ಹೀಗಾಗಿ ಕಾರ್ಪೊರೇಟ್ ಶಕ್ತಿಗಳ ಕಣ್ಣು ಬಿದ್ದಿದೆ” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಅಮಿತ್‌ ಶಾ ಅವರ ಈ ಹೇಳಿಕೆಗೆ ಹಾಲು ಉತ್ಪಾದಕರು, ಮಾರಾಟಗಾರರು ಮತ್ತು ಕನ್ನಡಪರ ಸಂಘಸಂಸ್ಥೆಗಳಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಲಾಭದಲ್ಲಿರುವ ಮತ್ತು ಅದಕ್ಕಿಂತ ಮುಖ್ಯವಾಗಿ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರಾಂಡಿನ ಕೆಎಂಎಫ್‌ ಒಕ್ಕೂಟವನ್ನು ಯಾವ ಕಾರಣಕ್ಕೂ ಗುಜರಾತ್‌ನ ಅಮುಲ್‌ ಬ್ರಾಂಡಿನೊಂದಿಗೆ ವಿಲೀನ ಮಾಡಬಾರದು.

ದೇಶದ ರೈಲ್ವೆ, ವಿಮಾನ, ಹೆದ್ದಾರಿಗಳು, ಟೆಲಿಕಾಂ ವಲಯ ಸೇರಿದಂತೆ ಪ್ರತಿ ವಲಯದಲ್ಲಿ ಗುಜರಾತಿನ ಅಂಬಾನಿ ಮತ್ತು ಅದಾನಿ ಕಂಪನಿಗಳ ಏಕಸ್ವಾಮ್ಯಕ್ಕೆ ಅವಕಾಶ ಮಾಡಿಕೊಟ್ಟು, ಇಡೀ ದೇಶವನ್ನು ಗುಜರಾತಿನ ವಸಾಹತು ಮಾಡಿರುವವರು, ಇದೀಗ ಸಹಕಾರ ವಲಯವನ್ನೂ ಗುಜರಾತಿನ ಕೈವಶ ಮಾಡಲು ಹೊರಟಿದ್ದಾರೆ. ಕನ್ನಡಿಗರ ದಶಕಗಳ ಬದ್ಧತೆ ಮತ್ತು ಕಾಳಜಿಯಿಂದ ಕಟ್ಟಿದ ಕೆಎಂಎಫ್‌ ಲಾಭದಲ್ಲಿರುವಾಗಲೇ ಅದನ್ನು ವಶಪಡಿಸಿಕೊಳ್ಳುವ ಗುಜರಾತಿ ಹುನ್ನಾರ ಇದು ಎಂದು ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...