Homeಕರ್ನಾಟಕಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

- Advertisement -
- Advertisement -

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎನ್ನುತ್ತಾರೆ ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್.

ʼನಂದಿನಿʼ ಹಾಲು ಉತ್ಪನ್ನಗಳ ಹೆಸರಾದ ಕೆಎಂಎಫ್‌ಅನ್ನು ಗುಜರಾತಿನ ʼಅಮುಲ್‌ʼ ಬ್ರಾಂಡಿನ ಹಾಲು ಉತ್ಪಾದಕ ಸಂಸ್ಥೆಯಾದ ಗುಜರಾತ್‌ ಸಹಕಾರ ಹಾಲು ಮಾರಾಟ ಒಕ್ಕೂಟ(ಜಿಸಿಎಂಎಂಎಫ್)ದೊಂದಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಡಿರುವುದಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ಕಳೆದ ಅಕ್ಟೋಬರ್‌ 9ರಂದು ಅಸ್ಸಾಂನ ಗುವಾಹಟಿಯಲ್ಲಿ ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಅಮಿತ್‌ ಶಾ ಅವರು ಮೊದಲ ಬಾರಿಗೆ ಈ ಕುರಿತು ಮಾತನಾಡಿದ್ದರು. “ದೇಶದ ನೈಸರ್ಗಿಕ ಉತ್ಪನ್ನಗಳಿಗೆ ವಿದೇಶಗಳಲ್ಲಿ ಮಾನ್ಯತೆ ಪಡೆಯಲು ಕೆಎಂಎಫ್‌ ಸೇರಿದಂತೆ ದೇಶದ ಪ್ರಮುಖ ಐದು ಸಹಕಾರ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ಬಹುರಾಜ್ಯ ಸಹಕಾರ ಒಕ್ಕೂಟ ರಚಿಸಲು ಉದ್ದೇಶಿಸಲಾಗಿದೆ” ಎಂದಿದ್ದರು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದ ಮೆಗಾ ಡೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್‌ ಶಾ, “ಗುಜರಾತಿನ ಅಮುಲ್‌ ಸಹಕಾರ ಒಕ್ಕೂಟ ಪ್ರಗತಿಯ ಹಾದಿಯಲ್ಲಿದೆ. ಕರ್ನಾಟಕದ ನಂದಿನಿಯ ಕೆಎಂಎಫ್‌ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್‌ ಮತ್ತು ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ಆ ಹಿನ್ನೆಲೆಯಲ್ಲಿ ಅಮುಲ್‌ ಜೊತೆ ನಂದಿನಿಯನ್ನು ವಿಲೀನ ಮಾಡಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರೊ.ಎಂ.ಎಸ್.ಶ್ರೀರಾಮ್‌, “ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೊಡ್ಡವರ ಬಳಿ ಚಿಕ್ಕವರು ಸೇರಿಕೊಂಡರೆ ದೊಡ್ಡವರ ಮಾತೇ ಹೆಚ್ಚು ನಡೆಯುತ್ತದೆ. ಕಿರಾಣಿ ಅಂಗಣಿ ಚೆನ್ನಾಗಿಯೇ ನಡೆಯುತ್ತಿರುವಾಗ, ಸೂಪರ್‌ ಮಾರ್ಕೆಟ್‌ನಲ್ಲಿ ಹೋಗಿ ಸಿಕ್ಕಿಕೊಳ್ಳುವ ಅಗತ್ಯವಿಲ್ಲ. ಅಮುಲ್‌ನಿಂದ ನಂದಿನಿ ಕಲಿಯಬೇಕಾದ ಯಾವುದೇ ಪಾಠವಿಲ್ಲ. ಮೊದಲೆಲ್ಲ ಅಮುಲ್ ರಾಜಕೀಯದಿಂದ ಸ್ವಲ್ಪ ದೂರವಿತ್ತು. ಆದರೀಗ ಸಂಪೂರ್ಣವಾಗಿ ರಾಜಕೀಯ ನಡೆಯುತ್ತಿದೆ. ಕೆಎಂಎಫ್‌ನಲ್ಲಿ ಮೊದಲಿನಿಂದಲೂ ರಾಜಕೀಯವಿತ್ತು. ಆದರೆ ಅಮುಲ್‌ನಿಂದ ಇವರು ಕಲಿಯುವಂತಹದ್ದು ಏನೂ ಇಲ್ಲ” ಎಂದರು.

“ಅಮುಲ್ ಈಗ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಘಟಕಗಳನ್ನು ತೆರೆದು ವ್ಯವಹರಿಸುತ್ತಿದೆ. ಯುಪಿ, ಹರಿಯಾಣ, ಪಂಜಾಬ್, ಬಿಹಾರದಲ್ಲಿ ಅಮುಲ್‌ ಘಟಕಗಳನ್ನು ತೆರೆಯಲಾಗಿದೆ. ಅದೀಗ ಅಮುಲ್‌ ಗುಜರಾತಿನ ಸಂಸ್ಥೆಯಾಗಿ ಉಳಿದಿಲ್ಲ. ಗುಜರಾತ್‌ ರೈತರಿಂದ ಮಾತ್ರ ಹಾಲು ಖರೀದಿಸುವಂತಿದ್ದರೆ ಅದು ಗುಜರಾತ್ ಸಂಸ್ಥೆಯಾಗಿ ಉಳಿಯುತ್ತಿತ್ತು. ಮಾರಾಟ ಎಲ್ಲಿ ಬೇಕಾದರೂ ಮಾಡಬಹುದು, ಆದರೆ ಎಲ್ಲಿಂದ ಹಾಲನ್ನು ಖರೀದಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳು ಕೇಂದ್ರೀಕರಣಕ್ಕೆ ಒತ್ತು ನೀಡುತ್ತಿವೆ. ಇದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ” ಎಂದು ಅಭಿಪ್ರಾಯಪಟ್ಟರು.

ಚಿಂತಕರಾದ ಶಿವಸಂದರ್‌ ಅವರು ಪ್ರತಿಕ್ರಿಯಿಸಿ, “ಸಹಕಾರಿ ಹಾಲು ಉತ್ಪನ್ನಗಳ ಮಾರುಕಟ್ಟೆ ದೊಡ್ಡ ಮಟ್ಟದಲ್ಲಿದೆ. ಸಹಕಾರಿ ಕ್ಷೇತ್ರವನ್ನು ಕಾರ್ಪೊರೇಟೀಕರಣ ಮಾಡಲು ಇಟ್ಟಿರುವ ಮೊದಲ ಹೆಜ್ಜೆ ಇದು. ಗುಜರಾತ್‌ ಬಿಟ್ಟರೆ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಹಕಾರಿ ಹಾಲು ಒಕ್ಕೂಟ ಬಲವಾಗಿದೆ. ಹೀಗಾಗಿ ಕಾರ್ಪೊರೇಟ್ ಶಕ್ತಿಗಳ ಕಣ್ಣು ಬಿದ್ದಿದೆ” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಅಮಿತ್‌ ಶಾ ಅವರ ಈ ಹೇಳಿಕೆಗೆ ಹಾಲು ಉತ್ಪಾದಕರು, ಮಾರಾಟಗಾರರು ಮತ್ತು ಕನ್ನಡಪರ ಸಂಘಸಂಸ್ಥೆಗಳಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಲಾಭದಲ್ಲಿರುವ ಮತ್ತು ಅದಕ್ಕಿಂತ ಮುಖ್ಯವಾಗಿ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರಾಂಡಿನ ಕೆಎಂಎಫ್‌ ಒಕ್ಕೂಟವನ್ನು ಯಾವ ಕಾರಣಕ್ಕೂ ಗುಜರಾತ್‌ನ ಅಮುಲ್‌ ಬ್ರಾಂಡಿನೊಂದಿಗೆ ವಿಲೀನ ಮಾಡಬಾರದು.

ದೇಶದ ರೈಲ್ವೆ, ವಿಮಾನ, ಹೆದ್ದಾರಿಗಳು, ಟೆಲಿಕಾಂ ವಲಯ ಸೇರಿದಂತೆ ಪ್ರತಿ ವಲಯದಲ್ಲಿ ಗುಜರಾತಿನ ಅಂಬಾನಿ ಮತ್ತು ಅದಾನಿ ಕಂಪನಿಗಳ ಏಕಸ್ವಾಮ್ಯಕ್ಕೆ ಅವಕಾಶ ಮಾಡಿಕೊಟ್ಟು, ಇಡೀ ದೇಶವನ್ನು ಗುಜರಾತಿನ ವಸಾಹತು ಮಾಡಿರುವವರು, ಇದೀಗ ಸಹಕಾರ ವಲಯವನ್ನೂ ಗುಜರಾತಿನ ಕೈವಶ ಮಾಡಲು ಹೊರಟಿದ್ದಾರೆ. ಕನ್ನಡಿಗರ ದಶಕಗಳ ಬದ್ಧತೆ ಮತ್ತು ಕಾಳಜಿಯಿಂದ ಕಟ್ಟಿದ ಕೆಎಂಎಫ್‌ ಲಾಭದಲ್ಲಿರುವಾಗಲೇ ಅದನ್ನು ವಶಪಡಿಸಿಕೊಳ್ಳುವ ಗುಜರಾತಿ ಹುನ್ನಾರ ಇದು ಎಂದು ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...