Homeಕರ್ನಾಟಕಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

ಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

- Advertisement -
- Advertisement -

ಅಮುಲ್- ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, “ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಂದಿನಿಯನ್ನು ಅಮುಲ್‌ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

“ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ” ಎಂದು ತಿಳಿಸಿದ್ದಾರೆ.

“ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅಮತ್‌ ಶಾ ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.

“ಗುಜರಾತ್‌ನ ಅಮುಲ್ ಜೊತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎಂದು ಸಹಕಾರಿ ಕ್ಷೇತ್ರದ ಚಿಂತಕರು, ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್ ತಿಳಿಸಿದ್ದಾರೆ.

“ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ““ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...