Homeಮುಖಪುಟಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಅನಂತನಾಗ್‌ನ ಪಕ್ಷದ ಅಭ್ಯರ್ಥಿ ಮಿಯಾನ್ ಅಲ್ತಾಫ್ ರಜೌರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಗಾಯಗೊಂಡವರು ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತರಾಗಿದ್ದು, ಕೂಡಲೇ ಅವರನ್ನು ಮೆಂಧರ್ ಉಪಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತು. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಕಾರಣ ಅವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಈ ಘಟನೆಯನ್ನು ಭದ್ರತೆಯಲ್ಲಿನ ದೊಡ್ಡ ಲೋಪ ಎಂದು ನ್ಯಾಷನಲ್ ಕಾನ್ಫರೆನ್ಸ್ ಮಾಜಿ ಶಾಸಕ ಜಾವೇದ್ ರಾಣಾ ಹೇಳಿದ್ದಾರೆ.

“ಅಂತಹ ಭದ್ರತೆಯ ನಡುವೆ ನಮ್ಮ ಯುವಕರ ಮೇಲೆ ದಾಳಿ ಮಾಡಲಾಗಿದೆ. ದಾಳಿಕೋರರನ್ನು ಹಿಡಿದು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಪೊಲೀಸರಿಂದ ಒತ್ತಾಯಿಸುತ್ತೇನೆ” ಎಂದು ರಾಣಾ ಹೇಳಿದ್ದಾರೆ.

ತನಿಖೆಗೆ ಒತ್ತಾಯಿಸಿದ ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅವಳಿ ಭಯೋತ್ಪಾದನಾ ದಾಳಿಯ ಬಗ್ಗೆ ಒಂದು ದಿನ ಮುಂಚಿತವಾಗಿ ತನಿಖೆಗೆ ಆದೇಶಿಸುವಂತೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾನುವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದ್ದಾರೆ.

ಎರಡು ಭೀಕರ ಘಟನೆಗಳ ಬಗ್ಗೆ ತನಿಖೆಗೆ ಆದೇಶಿಸದಿದ್ದರೆ, ಅಂತಹ ದಾಳಿಯ ಹಿಂದಿನ ಅಪರಾಧಿಗಳನ್ನು ಕಂಡುಹಿಡಿಯಲು ತನಿಖೆ ನಡೆಸಲು ತಮ್ಮ ಪಕ್ಷವು “ಅಂತರರಾಷ್ಟ್ರೀಯ ಸಮಿತಿಯನ್ನು” ಆಹ್ವಾನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಶನಿವಾರ ರಾತ್ರಿ ಕಾಶ್ಮೀರದ ಎರಡು ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರು, ಶೋಪಿಯಾನ್‌ನಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಮಾಜಿ ಸರಪಂಚ್ ಐಜಾಜ್ ಶೇಖ್ ಅವರನ್ನು ಕೊಂದು ಅನಂತನಾಗ್‌ನಲ್ಲಿ ರಾಜಸ್ಥಾನದ ಪ್ರವಾಸಿ ದಂಪತಿಗಳನ್ನು ಗಾಯಗೊಂಡಿದ್ದಾರೆ.

“ದೆಹಲಿಯಲ್ಲಿ ಕುಳಿತಿರುವವರು ಭಯೋತ್ಪಾದನೆಗೆ 370ನೇ ವಿಧಿ ಕಾರಣ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ. ಆರ್ಟಿಕಲ್ ಅನ್ನು ರದ್ದುಗೊಳಿಸಿ ಎಷ್ಟು ವರ್ಷಗಳು ಕಳೆದಿವೆ? ಭಯೋತ್ಪಾದನೆ ನಿಂತಿದೆಯೇ?” ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದರು.

ಶೇಖ್ ಹತ್ಯೆಯನ್ನು ಉಲ್ಲೇಖಿಸಿದ ಅವರು, ಬಿಜೆಪಿಯ ಅಮಾಯಕ ಮಾಜಿ ಸರಪಂಚ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

“ಅವರಿಗೆ ಬದುಕುವ ಹಕ್ಕಿಲ್ಲವೇ? ಇದು ಸ್ವತಂತ್ರ ದೇಶ ಮತ್ತು ಯಾವುದೇ ಪಕ್ಷವು ಅವರ ಸಿದ್ಧಾಂತವನ್ನು ಪ್ರಚಾರ ಮಾಡಬಹುದು. ಅವರನ್ನು ಕೊಂದವರು ಯಾರು ಮತ್ತು ಅದನ್ನು ಶೀಘ್ರವಾಗಿ ತನಿಖೆ ಮಾಡಬೇಕು” ಎಂದು ಎನ್‌ಸಿ ಮುಖ್ಯಸ್ಥರು ಹೇಳಿದರು. ಅನಂತನಾಗ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

“ಅವರು (ಕೇಂದ್ರ) ತನಿಖೆಗೆ ಹೋಗದಿದ್ದರೆ, ಅಂತಹ ದಾಳಿಗಳಿಗೆ ಯಾರು ಹೊಣೆ ಎಂದು ತನಿಖೆ ಮಾಡಲು ನಾವು ಅಂತರರಾಷ್ಟ್ರೀಯ ಸಮಿತಿಯನ್ನು ಆಹ್ವಾನಿಸಬೇಕಾಗುತ್ತದೆ” ಎಂದು ಅಬ್ದುಲ್ಲಾ ಹೇಳಿದರು.

“ನಮ್ಮ ನೆರೆಯ ಪಾಕಿಸ್ತಾನಕ್ಕೆ ಭಯೋತ್ಪಾದನೆಯನ್ನು ನಿಲ್ಲಿಸುವಂತೆ ನಾನು ಹೇಳಲು ಬಯಸುತ್ತೇನೆ. ಯೋತ್ಪಾದನಾ ಚಟುವಟಿಕೆಗಳನ್ನು ನಿಲ್ಲಿಸಿದ ನಂತರ, ಎರಡೂ ದೇಶಗಳು ಒಟ್ಟಿಗೆ ಕುಳಿತು ತಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು” ಎಂದು ಅವರು ಹೇಳಿದರು.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಮನೆಯಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...