Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...