Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...